Publish Date: Tue, 23 Aug 2022 (20:04 IST)
Updated Date: Tue, 23 Aug 2022 (20:06 IST)
ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯಲ್ಲಿನ ಕಬಿನಿ ಕಾಲುವೆಗೆ ಬಿದ್ದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ದೇಶವಳ್ಳಿ ಗ್ರಾಮದ ಸುನಂದಾ ಮೃತ ದುರ್ದೈವಿ. ತೇಲಿಬಂದ ಶವದಿಂದ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಸಂತೇಮರಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಶವವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಪೊಲೀಸರು ರವಾನೆ ಮಾಡಿದ್ದಾರೆ.