Webdunia - Bharat's app for daily news and videos

Install App

ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

Webdunia
ಗುರುವಾರ, 1 ಸೆಪ್ಟಂಬರ್ 2022 (21:11 IST)
ಗಂಡ-ಹೆಂಡತಿಯ ನಡುವೆ ಜಗಳವಾದ ಹಿನ್ನೆಲೆಯಲ್ಲಿ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಗೌರಮ್ಮ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಗೌರಮ್ಮ ಒಂದು ವರ್ಷದ ಹಿಂದೆಯಷ್ಟೇ ರವಿತೇಜ ಎಂಬಾತನ ಜೊತೆ ಮದುವೆಯಾಗಿದ್ದಳು. ಅನುಪನಹಳ್ಳಿಯ ನಿವಾಸಿ ರವಿತೇಜ, ತುಮಕೂರು ಹೊರವಲಯದ ಮಂಚಗೊಂಡನಹಳ್ಳಿಯ ಗೌರಮ್ಮ ಇಬ್ಬರು ವಿವಾಹವಾಗಿದ್ರು. ಗೌರಮ್ಮಗೆ ತಂದೆ-ತಾಯಿ ಇಲ್ಲದ ಕಾರಣ ಚಿಕ್ಕಮ್ಮನೇ ಸಾಕಿ ಮದುವೆ ಮಾಡಿಕೊಟ್ಟಿದ್ದರು. ತುಮಕೂರಿನ ಯಲ್ಲಾಪುರದ ಗಾರ್ಮೆಂಟ್ಸ್‌‌ವೊಂದರಲ್ಲಿ ರವಿತೇಜ ಕೆಲಸ ಮಾಡುತ್ತಿದ್ದ. ಗೌರಮ್ಮ ಪರಿಶಿಷ್ಟ ಜಾತಿಯಾದ ಕಾರಣ ರವಿತೇಜ ನಿತ್ಯವೂ ಗಲಾಟೆ ಮಾಡಿ ಕಿರುಕುಳ ನೀಡುತ್ತಿದ್ದನಂತೆ. ಇದರಿಂದ ಮನನೊಂದು ಗೌರಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments