Webdunia - Bharat's app for daily news and videos

Install App

ರಾತ್ರಿ 12.00 ಗಂಟೆಗೆ ಗೃಹಿಣಿಯರು ಕರೆ ಮಾಡುತ್ತಾರೆ – ಆರಗ ಜ್ಞಾನೇಂದ್ರ

geetha
ಮಂಗಳವಾರ, 13 ಫೆಬ್ರವರಿ 2024 (18:01 IST)
ಬೆಂಗಳೂರು : ಮಂಗಳವಾರ ಸದನದಲ್ಲಿ ಅಕ್ರಮ ಮದ್ಯ ಮಾರಾಟದ ಕುರಿತು ಚರ್ಚೆ ನಡೆಯುವ ವೇಳೆ ಆರಗ ಜ್ಞಾನೇಂದ್ರ ಮಾತನಾಡಿದರು. ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟದ ಹಾವಳಿ ಮಿತಿ ಮೀರಿದೆ . ರಾತ್ರಿ 12.00 ಗಂಟೆಗೆ ಗೃಹಿಣಿಯರು ನನಗೆ ಕರೆ ಮಾಡಿ, ಈ ಅಕ್ರಮದಲ್ಲಿ ನಿಮ್ಮ ಪಾಲೂ ಇದೆಯೇ?, ಯಾಕೆ ಇದನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದು ಪ್ರಶ್ನಿಸುತ್ತಾರೆ ಎಂದು ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದರು.

ಶಾಸಕ ಧೀರಜ್‌ ಮುನಿರಾಜು ಅಬಕಾರಿ ಸಚಿವರಲ್ಲಿ ಕೇಳಿದ ಪ್ರಶ್ನೆ ಚರ್ಚೆಗೆ ಕಾರಣವಾಯಿತು . ಎಷ್ಟು ಅಕ್ರಮ ಮದ್ಯ ಮಾರಾಟ ಪ್ರಕರಣ ದಾಖಲಾಗಿದೆ ಎಂದು ಧೀರಜ್‌ ಮುನಿರಾಜು ಪ್ರಶ್ನೆಗೆ ಅಬಕಾರಿ ಸಚಿವರು ಉತ್ತರ ಒದಗಿಸಿ ಕಳೆದ ಒಂದು ವರ್ಷದಲ್ಲಿ 138 ಪ್ರಕರಣಗಳನ್ನು ದಾಖಲಿಸಿ 152 ಮಂದಿಯನ್ನು ಬಂಧಿಸಲಾಗಿದೆ ಎಂದರು. 

ಆಗ ಧೀರಜ್‌ ಮುನಿರಾಜು ಮಾತನಾಡಿ, ದೊಡ್ಡಬಳ್ಳಾಪುರದಲ್ಲಿ ಪ್ರತಿ ಹಳ್ಳಿಯಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ. ಜೊತೆಗೆ ಆಂಧ್ರದ ಗಡಿ ಜಿಲ್ಲೆಗಳಿಂದ ಸೇಂದಿಯನ್ನೂ ತಂದು ಮಾರುತ್ತಿದ್ದಾರೆ. ಈ ಕುರಿತು ಇದುವರೆಗೂ ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ ಎಂದರು. ಆರಗ ಜ್ಞಾನೇಂದ್ರ ಅವರೂ ಇದಕ್ಕೆ ದನಿಗೂಡಿಸಿ,  ಅಕ್ರಮ ಮದ್ಯ ಮಾರುವವರ ಮೇಲೆ ಮಾತ್ರವಲ್ಲದೇ ಅವರಿಗೆ ದೊಡ್ಡ ಪ್ರಮಾಣದಲ್ಲಿ ಮದ್ಯ ಒದಗಿಸುವವರ ಮೇಲೂ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments