Webdunia - Bharat's app for daily news and videos

Install App

ಲೋಕೇಶ್ ತಾಳಿಕಟ್ಟೆಗೆ ತರೀಕೆರೆ ‘ಕೈ’ ಟಿಕೆಟ್​​?

Webdunia
ಶನಿವಾರ, 8 ಏಪ್ರಿಲ್ 2023 (20:20 IST)
ಚಿಕ್ಕಮಗಳೂರಿನ ತರೀಕೆರೆ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್ ಘೋಷಣೆಯಾಗಿಲ್ಲ. ಟಿಕೆಟ್​ಗಾಗಿ ಪೈಪೋಟಿ ಆರಂಭವಾಗಿರುವುದರಿಂದ ಟಿಕೆಟ್​​​ ಘೋಷಣೆ ಕಗ್ಗಂಟಾಗಿದೆ. ಈ ಮೂಲಕ ತರೀಕೆರೆ ಕ್ಷೇತ್ರ ಭಾರೀ ಕುತೂಹಲ ಮೂಡಿಸಿದೆ. ಶ್ರೀನಿವಾಸ್ ಹಾಗೂ ಗೋಪಿಕೃಷ್ಣ ಜಗಳದಲ್ಲಿ ಟಿಕೆಟ್‌ ಘೋಷಣೆಯಾಗಿಲ್ಲ.. ಇಬ್ಬರ ಜಗಳದಲ್ಲಿ‌ ಮೂರನೇ ವ್ಯಕ್ತಿಗೆ ಲಾಭ ಆಗುತ್ತಾ ಎಂಬ ಪ್ರಶ್ನೆ ಮೂಡಿದ್ದು, ಲೋಕೇಶ್ ತಾಳಿಕಟ್ಟೆ ಇದರ ಲಾಭ ಪಡೆದುಕೊಳ್ತಾರಾ ಎಂಬ ಪ್ರಶ್ನೆ ಎದ್ದಿದೆ.. 2ನೇ ಪಟ್ಟಿಯಲ್ಲೂ ಕಾಂಗ್ರೆಸ್​​​ ಹೈಕಮಾಂಡ್​​​​ ತರೀಕೆರೆ ಟಿಕೆಟ್ ಘೋಷಿಸಿಲ್ಲ.. ಸ್ಕ್ರೀನಿಂಗ್ ಕಮಿಟಿ AICCಗೆ ಶ್ರೀನಿವಾಸ್, ಗೋಪಿಕೃಷ್ಣ ಮತ್ತು ಲೋಕೇಶ್ ತಾಳಿಕಟ್ಟೆ ಮೂವರ ಹೆಸರನ್ನು ಶಿಫಾರಸು ಮಾಡಿದೆ.. ವಿಪಕ್ಷ ನಾಯಕ ಸಿದ್ದರಾಮಯ್ಯ, KPCC ಅಧ್ಯಕ್ಷ D.K. ಶಿವಕುಮಾರ್​, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿ 3 ಬಣದಲ್ಲಿ ಲೋಕೇಶ್ ತಾಳಿಕಟ್ಟೆ ಗುರುತಿಸಿಕೊಂಡಿದ್ದಾರೆ.. ಶ್ರೀನಿವಾಸ್ ಹಾಗೂ ಗೋಪಿಕೃಷ್ಣ ಇಬ್ಬರಲ್ಲಿ ಒಬ್ಬರಿಗೆ ಟಿಕೆಟ್‌ ಕೊಟ್ರೆ ಬಂಡಾಯವೇಳುವ ಸಾಧ್ಯತೆ ಹಿನ್ನೆಲೆಯಲ್ಲಿ ಲೋಕೇಶ್ ತಾಳಿಕಟ್ಟೆಗೆ ಕಾಂಗ್ರೆಸ್​​ ಮಣೆ ಹಾಕುವ ಸಾಧ್ಯತೆ ದಟ್ಟವಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments