Webdunia - Bharat's app for daily news and videos

Install App

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ: ಪ್ರತಾಪಸಿಂಹ ಪ್ರಶ್ನೆ

Sampriya
ಭಾನುವಾರ, 24 ಆಗಸ್ಟ್ 2025 (14:14 IST)
Photo Credit X
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಶುರುವಾಗಿದೆ. ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟಕರಾಗಿ ಬುಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಈ ಘೋಷಣೆ ಮಾಡಿದ್ದಾರೆ. ಈ ಮೂಲಕ ಬುಕರ್ ಪ್ರಶಸ್ತಿ ಪುರಸ್ಕೃತ ಕನ್ನಡದ ಏಕೈಕ ಸಾಹಿತಿಗೆ ಗೌರವ ನೀಡಲಾಗಿದೆ. ಅದರ ಬೆನ್ನಲ್ಲೇ ಮೈಸೂರು ದಸರಾ ಉದ್ಘಾಟಿನೆಗೆ ಆಯ್ಕೆ ಮಾಡಿರುವುದು ತುಂಬಾ ಸಂತಸವಾಗಿದೆ ಎಂದು ಬಾನು ಮುಷ್ತಾಕ್ ಪ್ರತಿಕ್ರಿಯಿಸಿದ್ದರು. 

ಆದರೆ, ಬಾನು ಮುಷ್ತಾಕ್ ಅವರ ಆಯ್ಕೆಗೆ ಕೆಲ ಹಿಂದೂ ಸಂಘಟನೆ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇನ್ನು ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಹ ಸಹ ತಕರಾರು ತೆಗೆದಿದ್ದಾರೆ.

ಮೈಸೂರು ದಸರಾ ಶೇ 100ರಷ್ಟು ಧಾರ್ಮಿಕ ಆಚರಣೆ, ನವರಾತ್ರಿ ಉತ್ಸವ ನಡೆಯುತ್ತದೆ. ತಾಯಿ ಚಾಮುಂಡಿಗೆ ಪೂಜೆ ಸಲ್ಲಿಸಿ ದಸರಾಗೆ ಚಾಲನೆ ಕೊಡಲಾಗುತ್ತದೆ. ಬಾನು ಮುಷ್ತಾಕ್‌ಗೆ ತಾಯಿ ಚಾಮುಂಡಿ ಮೇಲೆ ನಂಬಿಕೆ ಇದೆಯಾ. ಸಾಹಿತಿ ಬಾನು ಮುಷ್ತಾಕ್ ಚಾಮುಂಡಿ ಭಕ್ತೆ ಎಂದು ಹೇಳಿದ್ದಾರಾ. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ ಎಂದು ಅವರು ಪ್ರಶ್ನಿಸುತ್ತಾರೆ ಪ್ರಶ್ನಿಸಿದ್ದಾರೆ.

ಬಾನು ಮುಷ್ತಾಕ್‌ ಅವರನ್ನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಘೋಷಿಸಿದರೆ ತಕಾರರು ಇಲ್ಲ. ಧಾರ್ಮಿಕ ನಂಬಿಕೆ ವಿರೋಧಿಗಳನ್ನೇ ಯಾಕೆ ಸಿಎಂ ಕರೆಯುತ್ತಾರೆ? ಮಹಾರಾಜರ ಪರಂಪರೆಯನ್ನು ಸಿಎಂ ಹೀಗೆ ಹಾಳು ಮಾಡುತ್ತಿದ್ದಾರೆ. ರಿಷಬ್ ಶೆಟ್ಟಿಗೆ ರಾಷ್ಟ್ರೀಯ ಪ್ರಶಸ್ತಿ ಬಂತು, ಅವರನ್ನು ಕರೆಯುತ್ತೀರಾ? ಪ್ರಶಸ್ತಿ ಬಂದವರನ್ನೆಲ್ಲಾ ದಸರಾ ಉದ್ಘಾಟನೆಗೆ ಕರೆಯಲು ಆಗುತ್ತಾ? ಎಂದು ಪ್ರತಾಪ್ ಸಿಂಹ ಅವರು ಮುಖ್ಯಮಂತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ: ಪ್ರತಾಪಸಿಂಹ ಪ್ರಶ್ನೆ

ಮುಂದಿನ ಸುದ್ದಿ
Show comments