Webdunia - Bharat's app for daily news and videos

Install App

ಸಿಬಿಐ ಮೇಲೆ ಬಿಜೆಪಿಗೆ ಇದ್ದಕ್ಕಿದ್ದಂತೆ ವ್ಯಾಮೋಹ ಹೇಗೆ ಬಂತು: ಸಿಎಂ ಪ್ರಶ್ನೆ

Webdunia
ಸೋಮವಾರ, 28 ಜುಲೈ 2014 (13:39 IST)
ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ  ವಹಿಸಲು ರಾಜ್ಯಸರ್ಕಾರ ತೀರ್ಮಾನಿಸಿದೆ. ಹೈಕೋರ್ಟ್ ನಿವೃತ್ತನ್ಯಾಯಮೂರ್ತಿಯಿಂದ ತನಿಖೆ ನಡೆಸುವುದಾಗಿ ಸಿಎಂ ಇಂದು ವಿಧಾನಸಭೆಯಲ್ಲಿ ಘೋಷಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಸಿಬಿಐ ತನಿಖೆಗೆ ಒತ್ತಾಯಿಸುವುದರ ಕಾರಣವನ್ನು ಸಿಎಂ ಸಿದ್ದರಾಮಯ್ಯ ಬಿಡಿಸಿಟ್ಟರು.  ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವಿರುವುದರಿಂದ ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯಿಸುತ್ತಿದೆ.

 ಸಿಬಿಐ ಕಾಂಗ್ರೆಸ್ ಬ್ಯೂರೋ ಆಫ್ ಇನ್‌ವೆಸ್ಟಿಗೇಷನ್ ಅನ್ನುತ್ತಿದ್ದರು. ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತವಿದ್ದಾಗ ಸಿಬಿಐ ತನಿಖೆಗೆ ಯಾವುದೇ ಪ್ರಕರಣವನ್ನು ವಹಿಸಬೇಕೆಂದು ಹೇಳಿದಾಗಲೆಲ್ಲಾ ಬಿಜೆಪಿ  ವಿರೋಧಿಸುತ್ತಾ ಬಂದಿತ್ತು. ಸಿಬಿಐ ವಿರುದ್ಧ ಲೇವಡಿ ಮಾಡುತ್ತಿದ್ದರು.

ಈಗ ಸಿಬಿಐ ಮೇಲೆ ಬಿಜೆಪಿಗೆ ಇದ್ದಕ್ಕಿದ್ದಂತೆ  ವ್ಯಾಮೋಹ ಬಂದಿದೆ. ಕರ್ನಾಟಕದಲ್ಲಿ ಬಿಜೆಪಿ ಆಡಳಿತದ ಐದು ವರ್ಷದಲ್ಲಿ ಸಿಬಿಐ ಯಾವುದೇ ಪ್ರಕರಣ ಕೈಗೆತ್ತಿಕೊಂಡಿಲ್ಲ.  ರಾಜ್ಯದಲ್ಲೇ ಹಲವು ತನಿಖಾ ಸಂಸ್ಥೆಗಳಿವೆ. ನಾವ್ಯಾಕೆ ಸಿಬಿಐ ತನಿಖೆಗೆ ವಹಿಸಬೇಕು ಎಂದು ಸಿಎಂ ಪ್ರಶ್ನಿಸಿದರು. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments