Webdunia - Bharat's app for daily news and videos

Install App

ಆ ಬಾಕ್ಸ್ ಸ್ಫೋಟಗೊಂಡಿದ್ದು ಹೇಗೆ?

Webdunia
ಬುಧವಾರ, 21 ಆಗಸ್ಟ್ 2019 (19:48 IST)
ಆ ಬಾಕ್ಸ್ ಸ್ಫೋಟಗೊಂಡಿದ್ದಕ್ಕೆ ಜನರು ಬೆಸ್ಕಾಂ ಮೇಲೆ ಗರಂ ಆಗಿದ್ದಾರೆ.
ವಿದ್ಯುತ್ ಕಂಬದಲ್ಲಿದ್ದ ಎಲೆಕ್ಟ್ರಾನಿಕ್ ಬಾಕ್ಸ್ ಒಂದು ಸ್ಪೋಟಗೊಂಡು ಬೆಂಕಿ ಹೊತ್ತಿ ಉರಿದಿರುವಂತಹ ಘಟನೆ ನಡೆದಿದೆ.

 ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಆನೇಕಲ್ ಪಟ್ಟಣದ ಎಸ್ ಬಿ‌ ಎಸ್ ಬ್ಯಾಂಕ್ ಮುಂಭಾಗದಲ್ಲಿದ್ದ ವಿದ್ಯುತ್  ಕಂಬದಲ್ಲಿ ಮುಂಜಾನೆ 8 ಗಂಟೆಯ ಸುಮಾರಿಗೆ ಕಂಬದಲ್ಲಿದ್ದ ಎಲೆಕ್ಟ್ರಾನಿಕ್ ಬಾಕ್ಸ್ ಸ್ಪೋಟಗೊಂಡು ಕೆಲ ಕಾಲ ಕಂಬದಲ್ಲಿಯೇ ಹೊತ್ತಿ ಉರಿದಿದೆ.

ಅಲ್ಲಿದ್ದಂತಹ ಸುತ್ತಮುತ್ತಲಿನ ಜನರು ಅಲ್ಲಿಂದ ಓಡಿ ಹೋಗಿದ್ದು ಆ ಜಾಗದಲ್ಲಿ ಬ್ಯಾಂಕ್ ಹಾಗು‌ ಸರ್ಕಾರಿ‌ ಆಸ್ಪತ್ರೆ ಇವೆ. ಕೆಲ ಕಾಲ ಜನರ ಆತಂಕಕ್ಕೆ ಕಾರಣವಾಗಿತ್ತು.   ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಓರ್ವ ಬೆಸ್ಕಾಂ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಸ್ಥಳೀಯರ ಸಹಾಯ ಪಡೆದರು.  

ಆದರೂ ಬೆಂಕಿಯನ್ನು ನಂದಿಸಲು ಸಾಧ್ಯವಾಗಲಿಲ್ಲ. ಇನ್ನು ಇಂತಹ ಅವಘಡ ನಡೆದ್ರು ಓರ್ವ ಬೆಸ್ಕಾಂ ಸಿಬ್ಬಂದಿಯನ್ನು ಮಾತ್ರ ಸ್ಥಳಕ್ಕೆ ಕಳುಹಿಸಿದ್ದು ಸ್ಥಳೀಯ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಬೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯವೇ ವಿದ್ಯುತ್ ಕಂಬಗಳಲ್ಲಿ ಬೆಂಕಿ‌ ಕಾಣಿಸಿಕೊಳ್ಳುವುದಕ್ಕೆ ಕಾರಣ ಅಂತ ಜನರು ದೂರಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments