Webdunia - Bharat's app for daily news and videos

Install App

ಆ ಬ್ಯಾಂಕ್ ಸಿಬ್ಬಂದಿ ಗ್ರಾಹಕರೊಂದಿಗೆ ವರ್ತಿಸಿದ್ದು ಹೇಗೆ? ಶಾಕಿಂಗ್

Webdunia
ಸೋಮವಾರ, 3 ಜೂನ್ 2019 (16:02 IST)
ಅಲ್ಲಿನ ಬ್ಯಾಂಕ್ ಸಿಬ್ಬಂದಿ ಗ್ರಾಹಕರೊಂದಿಗೆ ಅಸಭ್ಯ ವರ್ತನೆ ತೋರಿದ್ದಾರೆ.

ಸರ್ಕಾರಿ ಕೆಲಸದ ಮೇಲೆ ಬ್ಯಾಂಕ್ ಗೆ ತೆರಳಿದ್ದ  ಗ್ರಾಹಕನ ಮೇಲೆ ಬ್ಯಾಂಕ್ ಸಿಬ್ಬಂದಿ ಅವಾಜ್ ಹಾಕಿದ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಕಿತ್ತೂರಿನ  ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಸಿಬ್ಬಂದಿಯಿಂದ ಅಸಭ್ಯ ವರ್ತನೆ ತೋರಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಗ್ರಾಹಕ ಸುನಿಲ್ ನರಗುಂದ ಜೊತೆ ಬ್ಯಾಂಕ್ ಸಿಬ್ಬಂದಿ ಅಸಭ್ಯ ವರ್ತನೆ ತೋರಿದ್ದಾರೆ ಎಂದು ದೂರಿದ್ದಾರೆ.

ಮಾಸಿಕ ವೇತನದ ಚೆಕ್ ಸಂದಾಯ ಮಾಡಲು ಬ್ಯಾಂಕ್ ಗೆ ತೆರಳಿದ್ದ  ಗ್ರಾಹಕ ಸುನಿಲ್ ಗೆ, ಮೊದಲು 10 ನಿಮಿಷಗಳ ಕಾಲ ಕಾಯಿಸಿದ್ದಾರೆ ಬ್ಯಾಂಕ್  ಸಿಬ್ಬಂದಿ.

ಕೆಲಸ ಮಾಡ್ತಿವಿ ಮಾಡ್ತಿವಿ ಅಂತ ಹೇಳಿ ನಂತರ ಮತ್ತೆ ಅರ್ಧ ಗಂಟೆಯ ಕಾಲ ಕಾಯಿಸಿದ್ದಾರೆ ಸಿಬ್ಬಂದಿ. ಚೆಕ್ ರಿಸೀವ್ ಮಾಡಿ ಕೊಡಲು ಎರಡು ನಿಮಿಷದ ಕೆಲಸಕ್ಕೆ ಅರ್ಧ ಗಂಟೆ ಕಾಯಿಸಿ ಮತ್ತೆ ಊಟ ಮಾಡಿ ಬಂದು ನಿನ್ನ ಚೆಕ್ ತೆಗೆದುಕೊಳ್ಳುತ್ತೇನೆ ಎಂದು ಕಾಲಹರಣ ಮಾಡಿದ್ದಾರೆ ಬ್ಯಾಂಕ್ ಸಿಬ್ಬಂದಿ.

ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ಅಸಭ್ಯ ವರ್ತನೆ ಕುರಿತು  ಮೊಬೈಲ್ ನಲ್ಲಿ ಸೆರೆ ಹಿಡಿಯಲು ಮುಂದಾದ ಗ್ರಾಹಕ ಸುನಿಲ್ ಗೆ ಸಿಬ್ಬಂದಿ ಅವಾಜ್ ಹಾಕಿದ್ದಾರೆ. ಈ ಕಿತ್ತಾಟ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗ್ರಾಹಕರೊಂದಿಗೆ ಸೌಜನ್ಯದಿಂದ ವರ್ತಿಸದ ಸಿಬ್ಬಂದಿ ವಿರುದ್ಧ ಕಿತ್ತೂರು ಪೋಲಿಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನ, ಬೆಳ್ಳಿ ಬೆಲೆ ಇಂದು ಶಾಕ್ ಆಗುವಂತಿದೆ

ಅವಧಿಗೂ ಮುನ್ನ ರಾಜೀನಾಮೆ ನೀಡಿದ ಉಪರಾಷ್ಟ್ರಪತಿಗಳು ಯಾರೆಲ್ಲಾ ಇಲ್ಲಿದೆ ಲಿಸ್ಟ್

ಹೆಣ್ಣು ಮಕ್ಕಳು ಬೇಗ ಮುಟ್ಟಾಗುತ್ತಿರುವುದು ಯಾಕೆ: ಖ್ಯಾತ ವೈದ್ಯೆ ಪದ್ಮಿನಿ ಪ್ರಸಾದ್ ಟಿಪ್ಸ್

ಇಂದಿನಿಂದ ಮೂರು ದಿನ ಯಾರ ಕೈಗೂ ಸಿಗಲ್ಲ ಡಿಕೆ ಶಿವಕುಮಾರ್

ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ದಿಡೀರ್ ರಾಜೀನಾಮೆ ಸಲ್ಲಿಸಿದ್ದರ ಹಿಂದಿದೆಯಾ ಬೇರೇ ಕಾರಣ

ಮುಂದಿನ ಸುದ್ದಿ
Show comments