Webdunia - Bharat's app for daily news and videos

Install App

ಹೈಕೋರ್ಟ್ ವಕೀಲ ದಂಪತಿಗೆ ಮದ್ಯರಾತ್ರಿ ಥಳಿಸಿ ಆ ಮೇಲೆ ಮಾಡಿದ್ದೇನು?

Webdunia
ಗುರುವಾರ, 14 ಮಾರ್ಚ್ 2019 (14:05 IST)
ಹೈಕೋರ್ಟ್ ವಕೀಲರೊಬ್ಬರ ಮೇಲೆ ದುಷ್ಕರ್ಮಿಗಳು ಮದ್ಯರಾತ್ರಿ ಮನೆಗೆ ನುಗ್ಗಿ ಥಳಿಸಿರುವ ಘಟನೆ ನಡೆದಿದೆ.

ಕಿಟಕಿಯಿಂದ ಮನೆಯೊಳಗೆ ನುಗ್ಗಿ, ಮಲಗಿದವರ ಮೇಲೆ ಹಲ್ಲೆ ಮಾಡಿದ ದರೋಡೆ ಮಾಡಿರುವ ಘಟನೆ ಕಲಬುರ್ಗಿಯ ಗಾಬರೆ ಲೇಔಟ್ ನಲ್ಲಿ ನಡೆದಿದೆ. ಕಿಟಕಿಯ ಗ್ರಿಲ್ ಮುರಿದು ಒಳ ನುಗ್ಗಿದ ಕಳ್ಳರು ಮನೆಯಲ್ಲಿ ಮಲಗಿದ್ದವರ ಮೇಲೆ ಹಲ್ಲೆ ಮಾಡಿದ್ದಾರೆ.

ನಂತರ ಅಲಮಾರಿಯಲ್ಲಿದ್ದ 200 ಗ್ರಾಮ್ ಚಿನ್ನಾಭರಣ, 50 ಸಾವಿರ ರೂಪಾಯಿ ನಗದು ದೋಚಿ ಪರಾರಿಯಾಗಿದ್ದಾರೆ. ಹೈಕೋರ್ಟ್ ವಕೀಲ ವೀರೇಶ್ ಬಿರಾದಾರ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದೆ. ವೀರೇಶ್ ಬಿರಾದಾರ ಹಾಗೂ ಸಂಗೀತಾ ಬಿರಾದಾರ ಎಂಬುವರ ಮೇಲೆ ದರೋಡೆಕೋರರು ಹಲ್ಲೆ ನಡೆಸಿದ್ದಾರೆ. ಬಡಿಗೆಯಿಂದ ಹಲ್ಲೆ ಮಾಡಲಾಗಿದ್ದು, ವೀರೇಶ್ ಬಿರಾದಾರ ತಲೆಗೆ ಗಾಯಗಳಾಗಿವೆ. ಸಂಗೀತಾ ಅವರ ಕೈ ಮತ್ತಿತರ ಕಡೆ ಗಾಯಗಳಾಗಿವೆ. ಇಬ್ಬರನ್ನೂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ದರೋಡೆಕೋರರಿಂದ ಕೃತ್ಯ ನಡೆದಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಎಸ್.ಪಿ. ಯಡಾ ಮಾರ್ಟಿನ್ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ವಕೀಲರ ಸಂಘ ಘಟನೆಯನ್ನು ಖಂಡಿಸಿದ್ದು, ನಗರದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments