ವಿಶೇಷ ಶ್ರಮಿಕ್ ರೈಲಿನಲ್ಲಿ ತೆರಳಿದ ಜನರೆಷ್ಟು?

Webdunia
ಗುರುವಾರ, 28 ಮೇ 2020 (20:47 IST)
ಲಾಕ್‌ಡೌನ್ ಹಿನ್ನೆಲೆಯಲ್ಲಿ ಕೊಂಕಣ ಪ್ರದೇಶದಲ್ಲಿ ಅತಂತ್ರರಾಗಿದ್ದರು ಇದೀಗ ತಮ್ಮ ತವರು ರಾಜ್ಯಕ್ಕೆ ಮರಳಿದ್ದಾರೆ.

 67,178 ಜನರನ್ನು ಕೊಂಕಣ ರೈಲ್ವೆಯು ವಿಶೇಷ ಶ್ರಮಿಕ್ ರೈಲುಗಳ ಮೂಲಕ ಅವರ ತವರು ರಾಜ್ಯಕ್ಕೆ ಕಳುಹಿಲಾಗಿದೆ.

 ಕೋವಿಡ್ -19 ಸೊಂಕು ಹರಡದಂತೆ ದೇಶಾದ್ಯಂತ ಲಾಕ್‌ಡೌನ್ ಘೋಷಿಸಲಾಗಿತ್ತು. ಹೀಗಾಗಿ ಕೊಂಕಣ ಪ್ರದೇಶದಲ್ಲಿ ಸಾವಿರಾರು ವಲಸೆ ಕಾರ್ಮಿಕರು ಸಿಕ್ಕಿಬಿದ್ದಿದ್ದರು. ಆಗ ಆಯಾ ರಾಜ್ಯ ಸರ್ಕಾರಗಳ ಕೋರಿಕೆಯ ಮೇರೆಗೆ ಕೊಂಕಣ ರೈಲ್ವೆಯು ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದ ಕೊಂಕಣ ಪ್ರದೇಶದಿಂದ ಸಂಕಷ್ಟಕ್ಕೀಡಾಗಿದ್ದ ವಲಸೆ ಕಾರ್ಮಿಕರನ್ನು ಅವರ ತವರು ರಾಜ್ಯಗಳಿಗೆ ಕಳುಹಿಸಲು 50 ವಿಶೇಷ ಶ್ರಮಿಕ್ ರೈಲುಗಳನ್ನು ಓಡಿಸಿದೆ.

ಶ್ರಮಿಕ್ ವಿಶೇಷ ರೈಲುಗಳು ಉಡುಪಿ, ಮಡಗಾಂವ್, ತಿವಿಮ್, ಕರ್ಮಲಿ, ಸಿಂದುದುರ್ಗ್, ರತ್ನಾಗಿರಿ ಮತ್ತು ಚಿಪ್ಲುನ್ ಕೊಂಕಣ ರೈಲ್ವೆ ನಿಲ್ದಾಣಗಳಿಂದ ಉತ್ತರಪ್ರದೇಶ, ಜಾರ್ಖಂಡ್, ಬಿಹಾರ, ಹಾಗೂ ಪಶ್ಚಿಮ ಬಂಗಾಳ ಸೇರಿದಂತೆ ಮುಂತಾದ ರಾಜ್ಯಗಳಿಗೆ 67,178 ಪ್ರಯಾಣಿಕರನ್ನು ಕರೆದೊಯ್ಯಲಾಗಿದೆ ಎಂದು ಕೊಂಕಣ ರೈಲ್ವೆ ಸಾರ್ವಜನಿಕ ಸಂಪರ್ಕಾಧಿಕಾರಿ ಕೆ. ಸುಧಾ ಕೃಷ್ಣಮೂರ್ತಿ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತರಗತಿಯಲ್ಲಿ ನಿರತರಾದ ವಿದ್ಯಾರ್ಥಿಗಳ ಮೇಲೆ ಬಿದ್ದ ಫ್ಯಾನ್‌, ಮುಂದೇನಾಯ್ತು ನೋಡಿ

ಎಲ್ಲ ಹೊರೆಯನ್ನು ಜನರ ಮೇಲೆ ಹಾಕುವ ಮೋದಿ ಯಾವಾಗ ಜವಾಬ್ದಾರಿ ವಹಿಸಿಕೊಳ್ಳುತ್ತಾರೆ

₹900ಕೋಟಿ ವೆಚ್ಚದಲ್ಲಿ ದೇಶದ ಎರಡನೇ ಅತಿ ದೊಡ್ಡ ಕ್ರೀಡಾಂಗಣಕ್ಕೆ ಸಿದ್ದರಾಮಯ್ಯ ಶಂಕುಸ್ಥಾಪನೆ

ಕಿರಾಣಿ ಅಂಗಡಿಗೆ ಹೋಗುತ್ತಿದ್ದ ಬಾಲಕಿಯ ಕಿಡ್ನ್ಯಾಪ್ ಮಾಡಿ ಕೊಲೆ: ಆರೋಪಿ ಅರೆಸ್ಟ್‌

ರಾಜ್ಯಸಭೆಯ ಅರ್ಜಿಗಳ ಸಮಿತಿ ಅಧ್ಯಕ್ಷರಾಗಿ ರಾಘವ್ ಚಡ್ಡಾ ನೇಮಕ

ಮುಂದಿನ ಸುದ್ದಿ
Show comments