ಹನಿಟ್ರ್ಯಾಪ್ ಮಾಡಲು ಹೋದವರನ್ನು ಸಚಿವ ಕೆಎನ್ ರಾಜಣ್ಣ ಹಿಡಿದು ಹಾಕಿದ್ದು ಹೇಗೆ

Krishnaveni K
ಶುಕ್ರವಾರ, 21 ಮಾರ್ಚ್ 2025 (09:56 IST)
Photo Credit: X
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಹನಿಟ್ರ್ಯಾಪ್ ವಿಚಾರ ಭಾರೀ ಸದ್ದು ಮಾಡುತ್ತಿದೆ. ತಮ್ಮನ್ನು ಹನಿಟ್ರ್ಯಾಪ್ ಮಾಡಲು ಬಂದವರನ್ನು ಸಚಿವ ಕೆಎನ್ ರಾಜಣ್ಣ ಹಿಡಿದು ಹಾಕಿದ್ದು ಹೇಗೆ? ಇಲ್ಲಿದೆ ವಿವರ.

ನಿನ್ನೆಯಿಡೀ ಸದನದಲ್ಲಿ ಕೋಲಾಹಲ ಸೃಷ್ಟಿಸಿದ್ದ ಹನಿಟ್ರ್ಯಾಪ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಕೋಲಾಹಲವನ್ನೇ ಸೃಷ್ಟಿಸುವ ಲಕ್ಷಣ ಕಾಣುತ್ತಿದೆ. ಸಹಕಾರ ಸಚಿವ ಕೆಎನ್ ರಾಜಣ್ಣ ತಮ್ಮ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂದಿದ್ದಾರೆ.

ಹನಿಟ್ರ್ಯಾಪ್ ಮಾಡುವ ಉದ್ದೇಶದಿಂದ ರಾಜಣ್ಣ ಅವರ ಸರ್ಕಾರೀ ನಿವಾಸಕ್ಕೆ ಎರಡು ಬಾರಿ ಗ್ಯಾಂಗ್ ಹೋಗಿತ್ತು. ಎರಡನೇ ಬಾರಿ ಹೋದಾಗ ಹನಿಟ್ರ್ಯಾಪ್ ಗ್ಯಾಂಗ್ ಸಿಕ್ಕಿಬಿದ್ದಿದೆ. ಎರಡನೇ ಬಾರಿ ಅದೇ ಗ್ಯಾಂಗ್ ಬಂದಾಗ ಸಂಶಯಗೊಂಡ ರಾಜಣ್ಣ ಏನು, ಎತ್ತ ಎಂದು ವಿಚಾರಣೆ ನಡೆಸಿದ್ದಾರೆ. ನಿಮ್ಮನ್ನು ಕಳುಹಿಸಿದ್ದು ಯಾರು ಎಂದು ಅಮೂಲಾಗ್ರವಾಗಿ ವಿಚಾರಿಸಿದ್ದಾರೆ.

ಆಗ ಅವರು ತಮ್ಮನ್ನು ಕಳುಹಿಸಿದ್ದು ಯಾರು, ಕೃತ್ಯ ನಡೆಸಲು ಹೇಳಿದವರು ಯಾರು ಎಂಬ ಎಲ್ಲಾ ವಿವರ ಹೇಳಿದ್ದಾರಂತೆ. ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ಮಾತ್ರವಲ್ಲ ವಿಪಕ್ಷದವರು, ಕೇಂದ್ರ ನಾಯಕರೂ ಇದ್ದಾರೆ. ಇದರ ಬಗ್ಗೆ ಗಂಭೀರ ಕ್ರಮವಾಗಲೇಬೇಕು ಎಂದು ರಾಜಣ್ಣ ಹೇಳಿದ್ದಾರೆ. ಅಷ್ಟೇ ಅಲ್ಲ, ಕಾಂಗ್ರೆಸ್ ಹೈಕಮಾಂಡ್ ಗೂ ಈ ಬಗ್ಗೆ ದೂರು ನೀಡಲು ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಧಿಕಾರ ಹಂಚಿಕೆ ಬಗ್ಗೆ ಕೊನೆಗೂ ಮಹತ್ವದ ಅಪ್ ಡೇಟ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

20 ರೂ ಇದ್ದ ಟೊಮೆಟೊ ದರ ದಿಡೀರ್ ಏರಿಕೆ: ಎಷ್ಟಾಗಿದೆ ನೋಡಿ

ಅಯೋಧ್ಯೆ ಕೇಸರಿ ಧ್ವಜದಿಂದ ಮುಸ್ಲಿಮರಿಗೆ ಅನ್ಯಾಯ ಎಂದ ಪಾಕ್: ನಿಮ್ದು ಎಷ್ಟಿದೆಯೋ ನೋಡ್ಕೊಳ್ಳಿ ಎಂದ ಭಾರತ

ಮುಂದಿನ ಸುದ್ದಿ
Show comments