Webdunia - Bharat's app for daily news and videos

Install App

ಮುಖ್ಯಮಂತ್ರಿ ಹುದ್ದೆಗೆ ರಾಹುಲ್ ಗಾಂಧಿಗೆ ಸಿದ್ದರಾಮಯ್ಯ ಕೊಟ್ಟಿದ್ದೆಷ್ಟು: ಆರ್ ಅಶೋಕ್ ನೀಡಿದ ಲೆಕ್ಕ

Krishnaveni K
ಸೋಮವಾರ, 22 ಜುಲೈ 2024 (14:02 IST)
ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂಬ ಆರೋಪಗಳ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಪಟ್ಟಕ್ಕೇರಲು ರಾಹುಲ್ ಗಾಂಧಿಗೆ ಸಿದ್ದರಾಮಯ್ಯ ಎಷ್ಟು ಕೋಟಿ ಕೊಟ್ಟಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂಬ ಆರೋಪಗಳನ್ನು ಉಲ್ಲೇಖಿಸಿ ಆರ್ ಅಶೋಕ್ ಸೋಷಿಯಲ್ ಮೀಡಿಯಾ ಎಕ್ಸ್ ಪುಟದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಸರ್ಕಾರದಲ್ಲಿ ಎಲ್ಲದಕ್ಕೂ ರೇಟ್ ಫಿಕ್ಸ್ ಆಗಿದೆ. ನೀವು ಸಿಎಂ ಆಗುವುದಕ್ಕೆ ರಾಹುಲ್ ಗಾಂಧಿಯವರು ಎಷ್ಟು ರೇಟ್ ಫಿಕ್ಸ್ ಮಾಡಿದ್ದರು ಎಂದು ಪ್ರಶ್ನೆ ಮಾಡಿದ್ದಾರೆ.

‘ಎಲ್ಲದಕ್ಕೂ ರೇಟ್ ಫಿಕ್ಸ್! ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ವರ್ಗಾವಣೆ ದಂಧೆ ಎಷ್ಟು ಸಾಂಸ್ಥಿಕ ರೂಪ ಪಡೆದಿದೆ ಎಂದರೆ ಅಬಕಾರಿ ಇಲಾಖೆಯಲ್ಲಿ ಪೇದೆಯಿಂದ ಹಿಡಿದು ಉಪ ಆಯುಕ್ತ ಹುದ್ದೆವರೆಗೆ 5 ಲಕ್ಷ ರೂಪಾಯಿಯಿಂದ 3.5 ಕೋಟಿ ರೂ.ವರೆಗೆ ಲಂಚ ಫಿಕ್ಸ್ ಆಗಿದೆ. ಅಂದ ಹಾಗೆ ನಿಮ್ಮ ಮುಖ್ಯಮಂತ್ರಿ ಹುದ್ದೆಗೆ ರಾಹುಲ್ ಗಾಂಧಿಯವರು ಎಷ್ಟು ರೇಟ್ ಫಿಕ್ಸ್ ಮಾಡಿದ್ದರು ಸಿದ್ದರಾಮಯ್ಯನವರೇ’ ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಇಂತಿಷ್ಟು ಎಂದು ವರ್ಗಾವಣೆ ರೇಟ್ ಫಿಕ್ಸ್ ಆಗಿರುವ ಬಗ್ಗೆ ಪತ್ರಿಕೆಯೊಂದು ವರದಿ ಮಾಡಿತ್ತು. ಇದನ್ನು ಉಲ್ಲೇಖಿಸಿ ಆರ್ ಅಶೋಕ್ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

ಮುಂದಿನ ಸುದ್ದಿ
Show comments