Webdunia - Bharat's app for daily news and videos

Install App

ಅತುಲ್ ಸುಭಾಷ್ ಪತ್ನಿ,ಕುಟುಂಬದವರನ್ನು ಸೆರೆಹಿಡಿದಿದ್ದೇ ರೋಚಕ ಕಹಾನಿ

Krishnaveni K
ಸೋಮವಾರ, 16 ಡಿಸೆಂಬರ್ 2024 (11:10 IST)
ಬೆಂಗಳೂರು: ಟೆಕಿ ಅತುಲ್ ಸುಭಾಷ್ ಸಾವಿಗೆ ಕಾರಣವಾಗಿದ್ದಾರೆ ಎನ್ನಲಾದ ಪತ್ನಿ ನಿಖಿತಾ ಸಿಂಘಾನಿಯಾ ಮತ್ತು ಆಕೆಯ ತಾಯಿ, ಸಹೋದರನನ್ನು ಪೊಲೀಸರು ಸೆರೆ ಹಿಡಿದಿದ್ದೇ ರೋಚಕವಾಗಿತ್ತು.

ಅತುಲ್ ಸಾಯುವ ಮನ್ನ ಪತ್ನಿ ನಿಖಿತಾ ಮತ್ತು ಮನೆಯವರು ಕಿರುಕುಳ ನೀಡಿದ್ದರ ಬಗ್ಗೆ ವಿವರವಾಗಿ ವಿಡಿಯೋದಲ್ಲಿ ಹೇಳಿಕೊಂಡಿದ್ದ. ಈ ಕಾರಣಕ್ಕೆ ಪೊಲೀಸರು ಅವರ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದರು. ಇದರ ಸುಳಿವು ಸಿಕ್ಕ ಬೆನ್ನಲ್ಲೇ ನಿಖಿತಾ ಮತ್ತು ಮನೆಯವರು ಮಗನನ್ನು ಬಂಧುಗಳ ಮನೆಯಲ್ಲಿ ಬಿಟ್ಟು ತಾವೆಲ್ಲರೂ ಬೇರೆ ಬೇರೆ ಕಡೆಗೆ ಪರಾರಿಯಾಗಿದ್ದರು.

ಫೋನ್ ಮೂಲಕ ಪೊಲೀಸರು ತಮ್ಮನ್ನು ಪತ್ತೆ ಹಚ್ಚಬಹುದು ಎಂಬ ಭಯಕ್ಕೆ ಯಾರಿಗೂ ಕರೆ ಮಾಡುತ್ತಿರಲಿಲ್ಲ. ಅನಿವಾರ್ಯವಾದರೆ ಕೇವಲ ವ್ಯಾಟ್ಸಪ್ ಕಾಲ್ ಮೂಲಕ ಆಪ್ತರನ್ನು ಸಂಪರ್ಕಿಸುತ್ತಿದ್ದರು. ಆದರೆ ಅಕಸ್ಮಾತ್ತಾಗಿ ನಿಖಿತಾ ಮಾಮೂಲು ಕರೆ ಮಾಡಿದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಳು.

ಮೊದಲು ನಿಖಿತಾರನ್ನು ಹರ್ಯಾಣದ ಪಿಜಿಯಲ್ಲಿ ಸೆರೆ ಹಿಡಿಯಲಾಯಿತು. ಬಳಿಕ ಆಕೆಯ ತಾಯಿ ಮತ್ತು ಸಹೊದರ ಉತ್ತರ ಪ್ರದೇಶದ ಹೋಟೆಲ್ ನಲ್ಲಿ ಸಿಕ್ಕಿಬಿದ್ದಿದ್ದರು. ಬಳಿಕ ಮೂವರನ್ನೂ ಬೆಂಗಳೂರಿಗೆ ಕರೆ ತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಇದೀಗ ಮೂವರನ್ನೂ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments