Webdunia - Bharat's app for daily news and videos

Install App

ಗಂಗಾ ಕಲ್ಯಾಣ ಯೋಜನೆಯಡಿ ಉಚಿತ ಕೊಳವೆ ಬಾವಿ ಸೌಲಭ್ಯ ಪಡೆಯುವುದು ಹೇಗೆ ಇಲ್ಲಿದೆ ಡೀಟೈಲ್ಸ್

Krishnaveni K
ಸೋಮವಾರ, 5 ಆಗಸ್ಟ್ 2024 (11:58 IST)
ಬೆಂಗಳೂರು: ಕರ್ನಾಟಕ ಗಂಗಾ ಕಲ್ಯಾಣ ಯೋಜನೆಯಡಿ ರೈತರಿಗೆ ಉಚಿತವಾಗಿ ಕೊಳವೆ ಬಾವಿ ಸೌಲಭ್ಯ ದೊರೆಯುತ್ತದೆ. ಈ ಯೋಜನೆಯ ಫಲ ಪಡೆಯುವುದು ಹೇಗೆ ಇಲ್ಲಿದೆ ಡೀಟೈಲ್ಸ್.

ಗಂಗಾ ಕಲ್ಯಾಣ ಯೋಜನೆ ಎಂದರೇನು?
ರೈತರ ಹೊಲಗಳಿಗೆ ನೀರು ಹರಿಸಲು ಸುಲಭವಾಗುವಂತೆ ಕರ್ನಾಟಕ ಗಂಗಾ ಕಲ್ಯಾಣ ಯೋಜನೆ ಜಾರಿಗೆ ತರಲಾಗಿದೆ. ರೈತರ ಹೊಲಗಳಿಗೆ ನೀರಾವರಿ ಒದಗಿಸುವ ಸಲುವಾಗಿ ಕೊಳವೆ ಬಾವಿ ಕೊರೆಯುವುದು, ಪಂಪ್ ಸೆಟ್ ತೆಗೆಯಲು ಸರ್ಕಾರದಿಂದ ಹಣ ನೀಡಲಾಗುತ್ತದೆ. ಈ ಯೋಜನೆಯಲ್ಲಿ ನಿಮ್ಮ ಕೃಷಿ ಭೂಮಿಯಲ್ಲಿ ಕೊಳವೆ ಬಾವಿ ತೆರೆಯಲು, ಪಂಪಿಂಗ್, ವಿದ್ಯುತ್ ಸೌಲಭ್ಯಕ್ಕೂ ಸಹಾಯ ಮಾಡಲಾಗುತ್ತದೆ.

ಸಬ್ಸಿಡಿ ವಿವರ
ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ 2 ರಿಂದ 2.5 ಲಕ್ಷ ರೂ. ಹಣ ಸಬ್ಸಿಡಿ ಸಿಗುತ್ತದೆ. ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ರೈತರು ಹೆಚ್ಚಿನ ಪ್ರಯೋಜನ ಪಡೆದಿದ್ದಾರೆ. ಕರ್ನಾಟಕದಾದ್ಯಂತ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ.

ಅರ್ಜಿ ಸಲ್ಲಿಸಲು ಅರ್ಹತೆ
ಪರಿಶಿಷ್ಟ ಜಾತಿ/ವರ್ಗದ ಸಣ್ಣ ಮತ್ತು ಅತಿ ಸಣ್ಣರೈತರು ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. 8 ಎಕರೆವರೆಗಿನ ಜಮೀನಿಗೆ 4 ಲಕ್ಷ ಹಾಗೂ 15 ಎಕರೆವರೆಗಿನ ಜಮೀನಿಗೆ 6 ಲಕ್ಷ ಸಿಗುತ್ತದೆ.

ಬೇಕಾದ ದಾಖಲೆಗಳು
ಜಾತಿ ಪ್ರಮಾಣ ಪತ್ರ
ಬಿಪಿಎಲ್ ಕಾರ್ಡ್
ಆದಾಯ ಪ್ರಮಾಣ ಪತ್ರ
ಆಧಾರ್ ಕಾರ್ಡ್
ಬ್ಯಾಂಕ್ ಪಾಸ್ ಬುಕ್ ನ ಪ್ರತಿ
ಇತ್ತೀಚೆಗಿನ ಆರ್ ಟಿಸಿ
ಭೂ ಕಂದಾಯ ಪಾವತಿಸಿದ ರಸೀದಿ
ಜಾಮೀನುದಾರರಿಂದ ಸ್ವಯಂ ಘೋಷಣೆ ಪತ್ರ
ಇವಿಷ್ಟಿದ್ದರೆ ಆನ್ ಲೈನ್ ಮುಖಾಂತರ ಕರ್ನಾಟಕ ಸರ್ಕಾರದ ಅಧಿಕೃತ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಮುಂದಿನ ಸುದ್ದಿ
Show comments