Webdunia - Bharat's app for daily news and videos

Install App

ಗಂಗಾ ಕಲ್ಯಾಣ ಯೋಜನೆಯಡಿ ಉಚಿತ ಕೊಳವೆ ಬಾವಿ ಸೌಲಭ್ಯ ಪಡೆಯುವುದು ಹೇಗೆ ಇಲ್ಲಿದೆ ಡೀಟೈಲ್ಸ್

Krishnaveni K
ಸೋಮವಾರ, 5 ಆಗಸ್ಟ್ 2024 (11:58 IST)
ಬೆಂಗಳೂರು: ಕರ್ನಾಟಕ ಗಂಗಾ ಕಲ್ಯಾಣ ಯೋಜನೆಯಡಿ ರೈತರಿಗೆ ಉಚಿತವಾಗಿ ಕೊಳವೆ ಬಾವಿ ಸೌಲಭ್ಯ ದೊರೆಯುತ್ತದೆ. ಈ ಯೋಜನೆಯ ಫಲ ಪಡೆಯುವುದು ಹೇಗೆ ಇಲ್ಲಿದೆ ಡೀಟೈಲ್ಸ್.

ಗಂಗಾ ಕಲ್ಯಾಣ ಯೋಜನೆ ಎಂದರೇನು?
ರೈತರ ಹೊಲಗಳಿಗೆ ನೀರು ಹರಿಸಲು ಸುಲಭವಾಗುವಂತೆ ಕರ್ನಾಟಕ ಗಂಗಾ ಕಲ್ಯಾಣ ಯೋಜನೆ ಜಾರಿಗೆ ತರಲಾಗಿದೆ. ರೈತರ ಹೊಲಗಳಿಗೆ ನೀರಾವರಿ ಒದಗಿಸುವ ಸಲುವಾಗಿ ಕೊಳವೆ ಬಾವಿ ಕೊರೆಯುವುದು, ಪಂಪ್ ಸೆಟ್ ತೆಗೆಯಲು ಸರ್ಕಾರದಿಂದ ಹಣ ನೀಡಲಾಗುತ್ತದೆ. ಈ ಯೋಜನೆಯಲ್ಲಿ ನಿಮ್ಮ ಕೃಷಿ ಭೂಮಿಯಲ್ಲಿ ಕೊಳವೆ ಬಾವಿ ತೆರೆಯಲು, ಪಂಪಿಂಗ್, ವಿದ್ಯುತ್ ಸೌಲಭ್ಯಕ್ಕೂ ಸಹಾಯ ಮಾಡಲಾಗುತ್ತದೆ.

ಸಬ್ಸಿಡಿ ವಿವರ
ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ 2 ರಿಂದ 2.5 ಲಕ್ಷ ರೂ. ಹಣ ಸಬ್ಸಿಡಿ ಸಿಗುತ್ತದೆ. ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ರೈತರು ಹೆಚ್ಚಿನ ಪ್ರಯೋಜನ ಪಡೆದಿದ್ದಾರೆ. ಕರ್ನಾಟಕದಾದ್ಯಂತ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ.

ಅರ್ಜಿ ಸಲ್ಲಿಸಲು ಅರ್ಹತೆ
ಪರಿಶಿಷ್ಟ ಜಾತಿ/ವರ್ಗದ ಸಣ್ಣ ಮತ್ತು ಅತಿ ಸಣ್ಣರೈತರು ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. 8 ಎಕರೆವರೆಗಿನ ಜಮೀನಿಗೆ 4 ಲಕ್ಷ ಹಾಗೂ 15 ಎಕರೆವರೆಗಿನ ಜಮೀನಿಗೆ 6 ಲಕ್ಷ ಸಿಗುತ್ತದೆ.

ಬೇಕಾದ ದಾಖಲೆಗಳು
ಜಾತಿ ಪ್ರಮಾಣ ಪತ್ರ
ಬಿಪಿಎಲ್ ಕಾರ್ಡ್
ಆದಾಯ ಪ್ರಮಾಣ ಪತ್ರ
ಆಧಾರ್ ಕಾರ್ಡ್
ಬ್ಯಾಂಕ್ ಪಾಸ್ ಬುಕ್ ನ ಪ್ರತಿ
ಇತ್ತೀಚೆಗಿನ ಆರ್ ಟಿಸಿ
ಭೂ ಕಂದಾಯ ಪಾವತಿಸಿದ ರಸೀದಿ
ಜಾಮೀನುದಾರರಿಂದ ಸ್ವಯಂ ಘೋಷಣೆ ಪತ್ರ
ಇವಿಷ್ಟಿದ್ದರೆ ಆನ್ ಲೈನ್ ಮುಖಾಂತರ ಕರ್ನಾಟಕ ಸರ್ಕಾರದ ಅಧಿಕೃತ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments