Webdunia - Bharat's app for daily news and videos

Install App

ಬೆಂಗಳೂರು ಒನ್ ಕೇಂದ್ರದಲ್ಲಿ ಇ ಖಾತಾ ಮಾಡಿಸುವುದು ಹೇಗೆ, ಏನೆಲ್ಲಾ ದಾಖಲೆಗಳು ಬೇಕು

Krishnaveni K
ಗುರುವಾರ, 14 ನವೆಂಬರ್ 2024 (09:41 IST)
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳ ಇ ಖಾತಾ ಮಾಡಿಸಲು ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಂಗಳೂರು ಒನ್ ಕೇಂದ್ರದಲ್ಲಿ ಇ ಖಾತಾ ಮಾಡಿಸಲು ಅವಕಾಶ ಮಾಡಿಕೊಡಲಾಗಿದೆ. ಇ ಖಾತಾ ಮಾಡಿಸುವುದು ಹೇಗೆ, ಏನೆಲ್ಲಾ ದಾಖಲೆಗಳು ಬೇಕು ಇಲ್ಲಿ ನೋಡಿ.

ಇದುವರೆಗೆ ಇ ಖಾತಾ ಮಾಡಿಸಲು ಬಿಬಿಎಂಪಿ ಕಚೇರಿ ಅಥವಾ ಆನ್ ಲೈನ್ ಮೂಲಕ ಮಾಡಿಸಲು ಅವಕಾಶವಿತ್ತು. ಆದರೆ ಆನ್ ಲೈನ್ ಮೂಲಕ ಮಾಡಿಸಲು ಕೆಲವು ಸೈಬರ್ ಸೆಂಟರ್ ಗಳಲ್ಲಿ ಮಿತಿ ಮೀರಿ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿತ್ತು.

ಈ ಹಿನ್ನಲೆಯಲ್ಲಿ ಬಿಬಿಎಂಪಿ ಬೆಂಗಳೂರು ಒನ್ ಸಿಬ್ಬಂದಿಗಳಿಗೆ ತರಬೇತಿ ನೀಡಿ ಈ ಕೇಂದ್ರಗಳಲ್ಲೂ ಇ ಖಾತಾ ಮಾಡಿಸಲು ಅವಕಾಶ ನೀಡಿತ್ತು. ಬೆಂಗಳೂರು ಒನ್ ಕೇಂದ್ರಗಳಲ್ಲಿ 45 ರೂ. ಶುಲ್ಕ ಮತ್ತು ಪ್ರತಿ ದಾಖಲೆಯ ಪುಟ ಸ್ಕ್ಯಾನ್ ಮಾಡಲು 5 ರೂ. ಪಾವತಿಸಬೇಕಾಗುತ್ತದೆ. ಬಿಬಿಎಂಪಿಗೆ 125 ರೂ. ಅಂತಿಮ ಇ-ಖಾತಾ ಮುದ್ರಣಕ್ಕೆ ಸಿದ್ಧವಾದಾಗ ಪಾವತಿ ಮಾಡಬೇಕಾಗುತ್ತದೆ.

ಯಾವೆಲ್ಲಾ ದಾಖಲೆಗಳು ಬೇಕು?
ಆಸ್ತಿ ತೆರಿಗೆ ರಶೀದಿ
ಮಾರಾಟ ಅಥವಾ ನೊಂದಾಯಿತ ಪತ್ರ
ಮಾಲಿಕರ ಆಧಾರ್ ಕಾರ್ಡ್
ಬೆಸ್ಕಾಂ ಬಿಲ್
ಕಾವೇರಿ ನೀರಿನ ಸಂಪರ್ಕ ಹೊಂದಿದ್ದರೆ ಬಿಲ್
ಬಿಬಿಎಂಪಿಯಿಂದ ಕಟ್ಟಡ ಯೋಜನೆ ಅನುಮೋದನೆ ದಾಖಲೆ
ಡಿಸಿ ಪರಿವರ್ತನೆ ದಾಖಲೆಯಿದ್ದರೆ
ಬಿಡಿಎ ಅಥವಾ ಕರ್ನಾಟಕ ಹೌಸಿಂಗ್ ಬೋರ್ಡ್, ಯಾವುದೇ ಸರ್ಕಾರೀ ಪ್ರಾಧಿಕಾರದಿಂದ ಹಂಚಿಕೆಯಾಗಿದ್ದರೆ ಅದರ ಪತ್ರ
ಇವಿಷ್ಟು ದಾಖಲೆಗಳ ವಿವರ ಬೆಂಗಳೂರು ಒನ್ ನಲ್ಲಿ ಆನ್ ಲೈನ್ ನಲ್ಲಿ ನಿಮ್ಮ ವಿವರಗಳನ್ನು ದಾಖಲಿಸುವಾಗ ಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments