Webdunia - Bharat's app for daily news and videos

Install App

ವಿದ್ಯುತ್ ಬಿಲ್ ಪಾವತಿಸಿ ಅಂದದ್ದಕ್ಕೆ ಹೀಗಾ ಮಾಡೋದು?

Webdunia
ಮಂಗಳವಾರ, 30 ಜುಲೈ 2019 (17:12 IST)
ವಿದ್ಯುತ್ ಬಿಲ್ ಪಾವತಿಸಿ ಅಂತ ಹೇಳಿದ್ದಕ್ಕೆ ಬೆಸ್ಕಾಂ ನೌಕರನ ಮೇಲೆ ಹಲ್ಲೆ ನಡೆದಿದೆ.

ಕೋಲಾರದಲ್ಲಿ ಬೆಸ್ಕಾಂ ನೌಕರನ ಮೇಲೆ ಹಲ್ಲೆ ನಡೆದಿದೆ. ಬಾಕಿಯಿದ್ದ ವಿದ್ಯುತ್ ಬಿಲ್ ಪಾವತಿಸುವಂತೆ ಕೇಳಿದ್ದಕ್ಕೆ ಹಲ್ಲೆ ನಡೆಸಲಾಗಿದೆ. ಬಾಕಿಯಿದ್ದ ಕರೆಂಟ್ ಬಿಲ್ ಪಾವತಿಸುವಂತೆ ಕೇಳಿದ್ದೇ ಹಲ್ಲೆಗೆ ಕಾರಣವಾಗಿದೆ. ಹಲ್ಲೆಗೊಳಗಾದ ನೌಕರ ಪೊಲೀಸ್ ಠಾಣೆಗೆ ದೂರನ್ನು ಕೊಟ್ಟಿದ್ದಾನೆ.

ಕೋಲಾರ ತಾಲೂಕಿನ ನಾಗಲಾಪುರ ಗ್ರಾಮದ ನಾಗರಾಜು ಕೋಳಿಫಾರಂ ಹೊಂದಿದ್ದಾನೆ. ಈ ಕೋಳಿ ಫಾರಂಗೆ ವಿದ್ಯುತ್ ಸಂಪರ್ಕದ ಬಿಲ್ 5 ಸಾವಿರ ರೂಪಾಯಿಗಳಿಗೂ ಹೆಚ್ಚು ಬಾಕಿಯಿದೆ. ಬಾಕಿ ಹಣವನ್ನು 
ಪಾವತಿಸುವಂತೆ ಬೆಸ್ಕಾಂ ನೌಕರ ನವೀನ್ ಮಾಲೀಕರನ್ನು ಕೇಳಿದ್ದಾರೆ. ಆದ್ರೆ ಗ್ರಾಹಕ ನಾಗರಾಜು ಹಣ ಪಾವತಿಸಲು ಒಪ್ಪದೆ ದಬ್ಬಾಳಿಕೆ ನಡೆಸಿದ್ದಾನೆ. 

ಇದ್ರಿಂದಾಗಿ ಕೋಳಿ ಫಾರಂ ಘಟಕಕ್ಕೆ ಕಲ್ಪಿಸಿದ್ದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾನೆ. ಇದ್ರಿಂದ ರೊಚ್ಚಿಗೆದ್ದ ಗ್ರಾಹಕ ನಾಗರಾಜು, ಬೆಸ್ಕಾಂ ನೌಕರ ನವೀನ್ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದವರು ಜಗಳವನ್ನು ನಿಲ್ಲಿಸಿದ್ದಾರೆ. ಹಲ್ಲೆಗೊಳಗಾದ ನವೀನ್ ಕೋಲಾರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments