Webdunia - Bharat's app for daily news and videos

Install App

ವಿದ್ಯುತ್ ಬಿಲ್ ಪಾವತಿಸಿ ಅಂದದ್ದಕ್ಕೆ ಹೀಗಾ ಮಾಡೋದು?

Webdunia
ಮಂಗಳವಾರ, 30 ಜುಲೈ 2019 (17:12 IST)
ವಿದ್ಯುತ್ ಬಿಲ್ ಪಾವತಿಸಿ ಅಂತ ಹೇಳಿದ್ದಕ್ಕೆ ಬೆಸ್ಕಾಂ ನೌಕರನ ಮೇಲೆ ಹಲ್ಲೆ ನಡೆದಿದೆ.

ಕೋಲಾರದಲ್ಲಿ ಬೆಸ್ಕಾಂ ನೌಕರನ ಮೇಲೆ ಹಲ್ಲೆ ನಡೆದಿದೆ. ಬಾಕಿಯಿದ್ದ ವಿದ್ಯುತ್ ಬಿಲ್ ಪಾವತಿಸುವಂತೆ ಕೇಳಿದ್ದಕ್ಕೆ ಹಲ್ಲೆ ನಡೆಸಲಾಗಿದೆ. ಬಾಕಿಯಿದ್ದ ಕರೆಂಟ್ ಬಿಲ್ ಪಾವತಿಸುವಂತೆ ಕೇಳಿದ್ದೇ ಹಲ್ಲೆಗೆ ಕಾರಣವಾಗಿದೆ. ಹಲ್ಲೆಗೊಳಗಾದ ನೌಕರ ಪೊಲೀಸ್ ಠಾಣೆಗೆ ದೂರನ್ನು ಕೊಟ್ಟಿದ್ದಾನೆ.

ಕೋಲಾರ ತಾಲೂಕಿನ ನಾಗಲಾಪುರ ಗ್ರಾಮದ ನಾಗರಾಜು ಕೋಳಿಫಾರಂ ಹೊಂದಿದ್ದಾನೆ. ಈ ಕೋಳಿ ಫಾರಂಗೆ ವಿದ್ಯುತ್ ಸಂಪರ್ಕದ ಬಿಲ್ 5 ಸಾವಿರ ರೂಪಾಯಿಗಳಿಗೂ ಹೆಚ್ಚು ಬಾಕಿಯಿದೆ. ಬಾಕಿ ಹಣವನ್ನು 
ಪಾವತಿಸುವಂತೆ ಬೆಸ್ಕಾಂ ನೌಕರ ನವೀನ್ ಮಾಲೀಕರನ್ನು ಕೇಳಿದ್ದಾರೆ. ಆದ್ರೆ ಗ್ರಾಹಕ ನಾಗರಾಜು ಹಣ ಪಾವತಿಸಲು ಒಪ್ಪದೆ ದಬ್ಬಾಳಿಕೆ ನಡೆಸಿದ್ದಾನೆ. 

ಇದ್ರಿಂದಾಗಿ ಕೋಳಿ ಫಾರಂ ಘಟಕಕ್ಕೆ ಕಲ್ಪಿಸಿದ್ದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾನೆ. ಇದ್ರಿಂದ ರೊಚ್ಚಿಗೆದ್ದ ಗ್ರಾಹಕ ನಾಗರಾಜು, ಬೆಸ್ಕಾಂ ನೌಕರ ನವೀನ್ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದವರು ಜಗಳವನ್ನು ನಿಲ್ಲಿಸಿದ್ದಾರೆ. ಹಲ್ಲೆಗೊಳಗಾದ ನವೀನ್ ಕೋಲಾರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments