Webdunia - Bharat's app for daily news and videos

Install App

ನಿಮ್ಮ ವಾಹನಗಳಿಗೆ ಹೆಚ್​​ಎಸ್​​ಆರ್​​ಪಿ ನಂಬರ್‌ ಹಾಕಿಲ್ವ: ಇನ್ನು ನಿಮಗಿರುವುದು ಕೆಲವು ದಿನಗಳು ಮಾತ್ರ

Sampriya
ಶನಿವಾರ, 4 ಜನವರಿ 2025 (15:07 IST)
Photo Courtesy X
ಬೆಂಗಳೂರು: ವಾಹನಗಳ ಹೈಸೆಕ್ಯೂರಿಟಿ ನಂಬರ್​ ಪ್ಲೇಟ್​ (ಹೆಚ್​​ಎಸ್​​ಆರ್​​ಪಿ) ನಂಬರ್​ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆಯಾಗಿದೆ.  ಸಾರಿಗೆ ಇಲಾಖೆ ಈವರೆಗೆ 6 ಬಾರಿನೇ ಗಡುವು ವಿಸ್ತರಣೆ ಮಾಡಿ ಗ್ರಾಹಕರಿಗೆ ಅವಕಾಶ ನೀಡಿದೆ.

ಹೆಚ್​​ಎಸ್​​ಆರ್​​ಪಿ ನಂಬರ್​ ಪ್ಲೇಟ್​ ಅಳವಡಿಕೆಗೆ 6 ಬಾರಿ ಸಮಯ ವಿಸ್ತರಿಸಿದರೂ ಸಹ ವಾಹನ ಮಾಲೀಕರು ತಮ್ಮ ವಾಹನಕ್ಕೆ ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಸಿಕೊಂಡಿಲ್ಲ. ಹೀಗಾಗಿ, ರಾಜ್ಯ ಸಾರಿಗೆ ಇಲಾಖೆ ಮತ್ತೊಂದು ಅವಕಾಶ ನೀಡಿದೆ. ಈ ತಿಂಗಳು ಕೊನೆ ಅಂದರೆ ಜನವರಿ 31ರವರೆಗೆ ಹೆಚ್​​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆಗೆ ಸಮಯ ನೀಡಿ ರಾಜ್ಯ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ಹೈಸೆಕ್ಯೂರಿಟಿ ನಂಬರ್​ ಪ್ಲೇಟ್​ ಅಳವಡಿಕೆಗೆ ಈಗಾಗಲೇ ಅವಧಿ ಮುಗಿದಿದ್ದರೂ ಸಹ ರಾಜ್ಯ ಸಾರಿಗೆ ಇಲಾಖೆ ವಾಹನ ಮಾಲೀಕರಿಗೆ ಮತ್ತೆ ಮತ್ತೆ ಅವಕಾಶ ನೀಡುತ್ತಲೇ ಇದೆ. ಬರೊಬ್ಬರಿ ಆರು ಬಾರಿ ಗಡುವು ವಿಸ್ತರಿಸಿದೆ. 2019ಕ್ಕೂ ಮೊದಲು ನೋಂದಣಿಯಾದ ವಾಹನಗಳಿಗೆ ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆ ಮಾಡಿಕೊಳ್ಳಬೇಕು.

ಭದ್ರತೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ-1989 ಸೆಕ್ಷನ್‌ 50 ಹಾಗೂ 51 ಅನ್ವಯ ಎಲ್ಲಾ ವಾಹನಗಳಿಗೆ ಗರಿಷ್ಠ ಭದ್ರತೆಯ ನಂಬರ್‌ ಪ್ಲೇಟ್‌ಗಳನ್ನು ಅಳವಡಿಸಬೇಕಿದೆ. ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಎಂದರೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಶನ್ ಪ್ಲೇಟ್ ಎಂದರ್ಥ. ಕರ್ನಾಟಕದ ವಾಹಗಳಿಗೆ ಇದನ್ನು ಕಡ್ಡಾಯಗೊಳಿಸಲಾಗಿದೆ.

ಒಂದು ವೇಳೆ ಹೆಚ್‌ಎಸ್‌ಆರ್‌ಪಿ ಅಳವಡಿಸದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತವಾಗಿಲ್ಲದ ವಾಹನಗಳು ರಸ್ತೆಯಲ್ಲಿ ಓಡಾಡುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಸಹಾಯಕವಾಗಲಿದೆ.
==

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Raja Raguvamshi murder: ಗಂಡನನ್ನು ಕೊಲೆ ಬಗ್ಗೆ ಶಾಕಿಂಗ್ ವಿಚಾರ ಬಾಯ್ಬಿಟ್ಟ ಸೋನಮ್: ತಂದೆ ಫುಲ್ ಸಪೋರ್ಟ್

Siddaramaiah: ಚಿನ್ನಸ್ವಾಮಿ ದುರಂತದ ಬಗ್ಗೆ ಜೊತೆಯಲ್ಲಿದ್ದವರೂ ಹೇಳಲೇ ಇಲ್ವಲ್ಲಪ್ಪಾ.. ಸಿದ್ದರಾಮಯ್ಯ ಅಳಲು

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಮುಂದಿನ ಸುದ್ದಿ
Show comments