ಹೆಚ್ಚುವರಿ 2 ಲಕ್ಷ ಟನ್ ರಾಗಿ ಖರೀದಿಗೆ ಕೇಂದ್ರ ತಾತ್ವಿಕ ಒಪ್ಪಿಗೆ : ಸಿಎಂ ಬೊಮ್ಮಾಯಿ

Webdunia
ಶುಕ್ರವಾರ, 29 ಏಪ್ರಿಲ್ 2022 (16:42 IST)
ಕನಿಷ್ಟ ಬೆಂಬಲ ಯೋಜನೆಯಡಿ ಹೆಚ್ಚುವರಿ 2 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಕೇಂದ್ರದ ಅನುಮತಿ ಪಡೆದು ಖರೀದಿಸಲಾಗುವುದು. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2 ಲಕ್ಷ ಟನ್ ಹಾಗೂ 1 ,14,000 ಟನ್ ರಾಗಿ ಖರೀದಿ ಮಾಡಲು ತೀರ್ಮಾನಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ ರಾಗಿ ಖರೀದಿ ಮಾಡಬೇಕೆಂಬ ಬೇಡಿಕೆ ಇದ್ದು, ಈ ಬಗ್ಗೆ ಕೇಂದ್ರ ಆಹಾರ ಸಚಿವರೊಂದಿಗೆ ಚರ್ಚಿಸಿ ಅನುಮತಿ ಪಡೆಯಲಾಗುವುದು ಎಂದರು.
ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ:
ಪ್ರಾದ್ಯಾಪಕರ ನೇಮಕಾತಿ, ಪಿಎಸ್ ಐ ಪರೀಕ್ಷೆ ಹಗರಣ ಬಗ್ಗೆ ಪ್ರತಿಕ್ರಿಯೆ ನೀಡಿ, ಪಿಎಸ್‍ಐ ಪರೀಕ್ಷೆ ಅಕ್ರಮದ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ, ಈಗ ಸಿಐಡಿಗೆ ವಹಿಸಲಾಗಿದೆ. ಹಗರಣದ ಮೂಲಕ್ಕೆ ತಲುಪಲಾಗುವುದು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಪರೀಕ್ಷಾ ಹಗರಣಗಳು ಸರ್ಕಾರದ ವರ್ಚಿಸ್ಸಿಗೆ ಧಕ್ಕೆಯಾಗುವುದಿಲ್ಲವೇ ಎಂಬುದಕ್ಕೆ ಪ್ರತಿಕ್ರಯಿಸಿ, ಇಲ್ಲಿ ಸರ್ಕಾರದ ಪ್ರಶ್ನೆ ಬರುವುದಿಲ್ಲ. ಯೂಪಿಎಸ್‍ಸಿ ಪರೀಕ್ಷಾ ಮಾದರಿಯಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಈ ಪ್ರಕರಣವನ್ನು ಸರ್ಕಾರವೇ ಕಂಡುಹಿಡಿದು ತನಿಖೆ ನಡೆಸುತ್ತಿದೆ. ಪರೀಕ್ಷೆಗಳು ಪ್ರಾಮಾಣಿಕವಾಗಿ ನಡೆಯಬೇಕು. ಯಾವುದೇ ಅವ್ಯವಹಾರ ನಡೆದಿದ್ದರೂ ಅದನ್ನು ಸದೆಬಡಿಯಲಾಗುವುದು ಎಂದರು.‌

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments