ಹುಬ್ಬಳ್ಳಿ: ಕಾಂಗ್ರೆಸ್ ನಲ್ಲಿದ್ದಿದ್ದಕ್ಕೇ ಮಗಳನ್ನು ಕಳೆದುಕೊಂಡೆ ಎಂದ ನೇಹಾ ತಂದೆ

Krishnaveni K
ಶನಿವಾರ, 20 ಏಪ್ರಿಲ್ 2024 (09:45 IST)
Photo Courtesy: Twitter
ಹುಬ್ಬಳ್ಳಿ: ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಹೀರೇಮಠ್ ಮಗಳು ನೇಹಾ ಹತ್ಯೆಗೀಡಾದ ದುಃಖದಲ್ಲಿ ತಮ್ಮ ರಾಜಕೀಯ ಆಯ್ಕೆ ಬಗ್ಗೆ ಹಿಡಿಶಾಪ ಹಾಕಿದ್ದಾರೆ.

ತಮ್ಮನ್ನು ಸಮಾಧಾನಿಸಲು ಬಂದ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಮುಂದೆ ನಿರಂಜನ್ ಹೀರೇಮಠ್ ಅಳಲು ತೋಡಿಕೊಂಡಿದ್ದಾರೆ. ಯತ್ನಾಳ್ ಮುಂದೆ ದುಃಖ ತೋಡಿಕೊಂಡ ನಿರಂಜನ್ ಆ ಕಡೆ (ಕಾಂಗ್ರೆಸ್) ಹೋಗಿದ್ದಕ್ಕೇ ಮಗಳನ್ನು ಕಳೆದುಕೊಂಡೆ ಎಂದು ದುಃಖ ವ್ಯಕ್ತಪಡಿಸಿದ್ದಾರೆ.

ನಿನ್ನೆ ನೇಹ ಕೊಲೆ ವೈಯಕ್ತಿಕ ಎಂದಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್ ವಿರುದ್ಧ ನಿರಂಜನ್ ಹರಿಹಾಯ್ದಿದ್ದರು. ನಾನು ಕಾಂಗ್ರೆಸ್ ಪಕ್ಷದಲ್ಲಿದ್ದವನಾಗಿ ನನ್ನ ಪರಿಸ್ಥಿತಿಯೇ ಹೀಗಾದರೆ ಉಳಿದವರಿಗೆ ರಕ್ಷಣೆ ಸಿಗುವುದು ಹೇಗೆ ಸಾಧ್ಯ ಎಂದಿದ್ದರು. ಅಲ್ಲದೆ, ತಪ್ಪು ಮಾಹಿತಿಯಿಂದ ನನ್ನ ಕುಟುಂಬದ ಮಾನ ತೆಗಿಬೇಡಿ ಎಂದು ಕಿಡಿ ಕಾರಿದ್ದರು.

ನಿನ್ನೆ ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ, ಬಸನಗೌಡ ಪಾಟೀಲ್ ಯತ್ನಾಳ್ ನಿರಂಜನ್ ಕುಟುಂಬಸ್ಥರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ನೀವೇ ನಮಗೆ ನ್ಯಾಯ ಕೊಡಿಸಬೇಕು ಎಂದು ಕೈ ಮುಗಿದು ಕೇಳಿಕೊಂಡಿದ್ದರು. ಈ ವೇಳೆ ಜನರು ನೇಹಾ ಹತ್ಯೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಯತ್ನಾಳ್ ಗೆ ತೋರಿಸಿದ್ದರು. ನಿಮ್ಮಂತಹ ಖಡಕ್ ವ್ಯಕ್ತಿ ಸಿಎಂ ಆಗಿದ್ದರೆ ಏನೂ ಆಗುತ್ತಿರಲಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments