Webdunia - Bharat's app for daily news and videos

Install App

ಹುಬ್ಬಳ್ಳಿ ಅಂಜಲಿ ಹತ್ಯೆ ಮಾಡಿದ್ದೇಕೆ ಎಂದು ಬಾಯ್ಬಿಟ್ಟ ಆರೋಪಿ ವಿಶ್ವ

Krishnaveni K
ಬುಧವಾರ, 22 ಮೇ 2024 (14:47 IST)
ಹುಬ್ಬಳ್ಳಿ: ಇತ್ತೀಚೆಗೆ ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಪ್ರಕರಣಗಳಲ್ಲಿ ಅಂಜಲಿ ಅಂಬಿಗೇರ ಪ್ರಕರಣವೂ ಒಂದು. ಆರೋಪಿ ವಿಶ್ವನನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದು, ಈ ವೇಳೆ ಆತ ಕೊಲೆಗೆ ನಿಜ ಕಾರಣವೇನೆಂದು ಬಾಯ್ಬಿಟ್ಟಿದ್ದಾನೆ.

ಮೇ 15 ರಂದು ನಸುಕಿನಲ್ಲಿ ಅಂಜಲಿ ಮನೆಗೆ ನುಗ್ಗಿದ್ದ ಆರೋಪಿ ವಿಶ್ವ ಆಕೆಯ ಮೇಲೆ ಮನಬಂದಂತೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಈ ವೇಳೆ ತಡೆಯಲು ಬಂದ ಅಂಜಲಿಯ ತಂಗಿ ಮತ್ತು ಅಜ್ಜಿಯ ಮೇಲೂ ಹಲ್ಲೆ ನಡೆಸಿದ್ದಾನೆ. ಅಂಜಲಿ ಕೊಲೆ ಮಾಡಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ. ಬಳಿಕ ದಾವಣಗೆರೆಗೆ ತೆರಳುವ ರೈಲಿನಲ್ಲಿ ತಪ್ಪಿಸಿಕೊಂಡು ಹೋಗುವಾಗ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದು, ಈ ವೇಳೆ ಸಹ ಪ್ರಯಾಣಿಕರ ದರ್ಮದೇಟಿನಿಂದ ತಪ್ಪಿಸಿಕೊಳ್ಳಲು ರೈಲಿನಿಂದ ಹಾರುವಾಗ ಗಾಯ ಮಾಡಿಕೊಂಡು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ.

ಅಂಜಲಿಯನ್ನು ವಿಶ್ವ ಪ್ರೀತಿಸುತ್ತಿದ್ದ. ಆಕೆಯನ್ನು ಕೊಲೆ ಮಾಡುವ ಮೊದಲು ಮೈಸೂರಿಗೆ ಬರಲು ಕರೆದಿದ್ದ. ಆದರೆ ಆಕೆ ಬರಲೊಪ್ಪಲಿಲ್ಲ ಎಂದು ಕೊಲೆ ಮಾಡಿದ್ದ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿತ್ತು. ಇದೀಗ ಪೊಲೀಸ್ ವಿಚಾರಣೆ  ವೇಳೆ ತಾನೇಕೆ ಅಂಜಲಿಯನ್ನು ಕೊಲೆ ಮಾಡಿದೆ ಎಂಬುದನ್ನು ಬಾಯ್ಬಿಟ್ಟಿದ್ದಾನೆ.

ಕೊಲೆ ಮಾಡುವ ಮೊದಲು ಆಕೆಗೆ ಫೋನ್ ಪೇ ಮೂಲಕ 1000 ರೂ. ಖಾತೆಗೆ ಹಾಕಿದ್ದೆ. ಅದನ್ನು ಪಡೆದುಕೊಂಡು ಆಕೆ ನನ್ನ ನಂಬರ್ ಬ್ಲಾಕ್ ಮಾಡಿದ್ದಳು. ನಾನು ಬೆಳಗಿನ ಜಾವ ಆಕೆಯ ಮನೆಗೆ ಹೋಗಿ ಮೈಸೂರಿಗೆ ಹೋಗೋಣ ಬಾ ಎಂದು ಕರೆದೆ. ಆದರೆ ಆಕೆ ಬರಲೊಪ್ಪಲಿಲ್ಲ. ಆಗ ಕೋಪ ಬಂತು. ಅದಕ್ಕೇ ಚಾಕು ಹಾಕಿದೆ ಎಂದು ವಿಶ್ವ ಹೇಳಿಕೊಂಡಿದ್ದಾನೆ.

ಇನ್ನೊಂದೆಡೆ ಗಾಯಗೊಂಡಿರುವ ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದರೆ ಅಲ್ಲಿಯೂ ಶುಶ್ರೂಷೆ ಮಾಡುತ್ತಿದ್ದ ನರ್ಸ್ ಮೇಲೆ ದಾಳಿ ಮಾಡಲು ಯತ್ನಿಸಿದ್ದಾನೆ. ಕೊಠಡಿಯಲ್ಲಿ ಕೆಲಸ ಮಾಡುತ್ತಿದ್ದ ಆಯಾಗೆ ಧಮ್ಕಿ ಹಾಕಿದ್ದಾನೆ. ಇದರಿಂದ ಸಿ‍ಬ್ಬಂದಿ ಭಯಗೊಂಡಿದ್ದಾರೆ. ಇದರ ಬೆನ್ನಲ್ಲೇ ಆತನ ಚಿಕಿತ್ಸೆ ಪಡೆಯುತ್ತಿರುವ ಕೊಠಡಿಗೆ ಭದ್ರತೆ ಹೆಚ್ಚಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments