Hubballi ರೇಪ್ ಆಂಡ್ ಮರ್ಡರ್ ಕೇಸ್: ಪಂಚಭೂತಗಳಲ್ಲಿ ಲೀನವಾದ ಕಂದಮ್ಮ, ಅನಾಥವಾದ ಪಾಪಿಯ ಶವ

Krishnaveni K
ಸೋಮವಾರ, 14 ಏಪ್ರಿಲ್ 2025 (20:22 IST)
ಹುಬ್ಬಳ್ಳಿ: ಬಿಹಾರ ಮೂಲದ ಪಾಪಿ ರಿತೇಶ್ ಕುಮಾರ್ ನಿಂದ ಅತ್ಯಾಚಾರಕ್ಕೊಳಗಾಗಿ ಹತ್ಯೆಗೀಡಾದ ಹುಬ್ಬಳ್ಳಿಯ 5 ವರ್ಷದ ಎಳೆ ಕಂದಮ್ಮನ ಅಂತ್ಯ ಸಂಸ್ಕಾರ ಇಂದು ನೆರವೇರಿದೆ. ಇನ್ನೊಂದೆಡೆ ಪೊಲೀಸರಿಂದ ಎನ್ ಕೌಂಟರ್ ಗೀಡಾಗಿ ಸಾವನ್ನಪ್ಪಿದ ಆರೋಪಿ ರಿತೇಶ್ ಮೃತದೇಹ ಅನಾಥವಾಗಿ ಆಸ್ಪತ್ರೆಯಲ್ಲೇ ಬಿದ್ದಿದೆ.

ಮರಣೋತ್ತರ ಪರೀಕ್ಷೆ ಬಳಿಕ ಬಾಲಕಿಯ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಇಂದು ಹುಬ್ಬಳ್ಳಿಯ ದೇವಾಂಗ ಪೇಟ ರುದ್ರಭೂಮಿಯಲ್ಲಿ ಕುರುಬ ಸಂಪ್ರದಾಯದಂತೆ ಬಾಲಕಿಯ ಅಂತಿಮ ಸಂಸ್ಕಾರ ನೆರವೇರಿದೆ.

ಈ ವೇಳೆ ಸಾಕಷ್ಟು ಜನ ಸೇರಿದ್ದರು. ಪ್ರತಿಯೊಬ್ಬರ ಕಣ್ಣಂಚಿನಲ್ಲಿ ನೀರಿತ್ತು. ಪಾಪಿಯಿಂದ ನರಕಯಾತನೆ ಅನುಭವಿಸಿ ಪ್ರಾಣ ಬಿಟ್ಟ ಎಳೆಕಂದಮ್ಮನಿಗೆ ಎಲ್ಲರೂ ಭಾವುಕ ವಿದಾಯ ಹೇಳಿದ್ದಾರೆ.

ಇನ್ನೊಂದೆಡೆ ಪೊಲೀಸರಿಂದ ಎನ್ ಕೌಂಟರ್ ಗೀಡಾದ ಆರೋಪಿ ರಿತೇಶ್ ಕುಮಾರ್ ಶವವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿಡಲಾಗಿದೆ. ಆತನ ಕುಟುಂಬಸ್ಥರು ಎಂದು ಹೇಳಿಕೊಂಡು ಇದುವರೆಗೆ ಯಾರೂ ಮೃತದೇಹ ಪಡೆಯಲು ಬಂದಿಲ್ಲ. ಹೀಗಾಗಿ ಅನಾಥ ಶವವಾಗಿ ಶವಾಗಾರದಲ್ಲಿ ಬಿದ್ದಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಡ್ರಮ್ ನಲ್ಲಿರಿಸಿದ್ದ ಮುಸ್ಕಾನ್ ಕತೆ ಏನಾಗಿದೆ ನೋಡಿ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಅಯೋಧ್ಯೆಯಲ್ಲಿ ರಾರಾಜಿಸಲಿದೆ ರಘುವಂಶದ ಕೇಸರಿ ಧ್ವಜ: ಪ್ರಧಾನಿ ಮೋದಿ ಚಾಲನೆ

ರಾಜ್ಯದ ಸಿಎಂ ಕುರ್ಚಿ ಫೈಟ್ ಪರಿಹಾರಕ್ಕೆ ಈ ಒಂದು ಮೀಟಿಂಗ್ ಮೇಲೇ ಎಲ್ಲರ ಕಣ್ಣು

ಮುಂದಿನ ಸುದ್ದಿ
Show comments