ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ನೇಹಾ ತಂದೆಯ ಹೊಸ ಆರೋಪವೇನು

Krishnaveni K
ಸೋಮವಾರ, 3 ಫೆಬ್ರವರಿ 2025 (10:24 IST)
ಹುಬ್ಬಳ್ಳಿ: ಇಂಜಿನಿಯರಿಂಗ್ ವಿದ್ಯಾರ್ಥಿನಿ ಹುಬ್ಬಳ್ಳಿ ನೇಹಾ ಕೊಲೆ ಪ್ರಕರಣಕ್ಕೆ ಈಗ ಟ್ವಿಸ್ಟ್ ಸಿಕ್ಕಿದೆ. ನೇಹಾ ತಂದೆ ನಿರಂಜನ್ ಹೀರೇಮಠ ಹೊಸ ಆರೋಪವೊಂದನ್ನು ಮಾಡಿದ್ದಾರೆ.

ಹುಬ್ಬಳ್ಳಿಯ ನೇಹಾ ಮರ್ಡರ್ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಪ್ರೀತಿ ನಿರಾಕರಿಸಿದ್ದ ಫಯಾಜ್ ಎಂಬ ಯುವಕ ನೇಹಾಳನ್ನು ಇಂಜಿನಿಯರಿಂಗ್ ಕಾಲೇಜು ಆವರಣದಲ್ಲೇ ಚಾಕುವಿನಿಂದ ಬರ್ಬರವಾಗಿ ಇರಿದು ಹತ್ಯೆ ಮಾಡಿದ್ದ. ತಕ್ಷಣವೇ ಆತನನ್ನು ವಶಕ್ಕೆ ಪಡೆಯಲಾಗಿತ್ತು.

ಆದರೆ ಪ್ರಕರಣ ನಡೆದು 9 ತಿಂಗಳಾದರೂ ಇದುವರೆಗೆ ಪ್ರಕರಣ ಇತ್ಯರ್ಥವಾಗಿಲ್ಲ. ಕಾಂಗ್ರೆಸ್ ನಗರಪಾಲಿಕೆ ಸದಸ್ಯರೇ ಆಗಿರುವ ನೇಹಾ ತಂದೆ ನಿರಂಜನ್ ಹೀರೇಮಠ ರಾಜ್ಯ ಸರ್ಕಾರದ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಫಾಸ್ಟ್ ಟ್ರ್ಯಾಕ್ ಕೋರ್ಟ್ ನಿರ್ಮಿಸಿ ಶೀಘ್ರದಲ್ಲೇ ಪ್ರಕರಣ ಇತ್ಯರ್ಥ ಮಾಡುವುದಾಗಿ ಭರವಸೆಎ ನೀಡಿತ್ತು.

ಆದರೆ ಕೊಲೆ ನಡೆದು ಇಷ್ಟು ದಿನ ಆದರೂ ಪ್ರಕರಣ ಇತ್ಯರ್ಥವಾಗಿಲ್ಲ. ವಿಪರ್ಯಾಸವೆಂದರೆ ಹಂತಕ ಫಯಾಜ್ ನನ್ನು ಇತ್ತೀಚೆಗಿನವರೆಗೂ ಕಾಲೇಜಿನಿಂದಲೂ ಅಮಾನತು ಮಾಡಿರಲಿಲ್ಲ. ಹಿಂದೂ ಸಂಘಟನೆ ನಾಯಕ ಪ್ರಮೋದ್ ಮುತಾಲಿಕ್ ಕಾಲೇಜಿಗೆ ತೆರಳಿ ಒತ್ತಡ ಹೇರಿದ ಬಳಿಕವಷ್ಟೇ ಫಯಾಜ್ ನನ್ನು ಅಮಾನತು ಮಾಡಲಾಗಿತ್ತು.

ಇದೀಗ ನೇಹಾ ತಂದೆ ಹೊಸ ಆರೋಪ ಮಾಡಿದ್ದಾರೆ. ಪ್ರಕರಣದಲ್ಲಿ ಸ್ಥಳೀಯ ಶಾಸಕರೊಬ್ಬರ ಕೈವಾಡವಿದೆ ಎಂದಿದ್ದಾರೆ. ಈ ಪ್ರಕರಣದ ತನಿಖೆ ಎತ್ತ ಸಾಗುತ್ತಿದೆ ಎಂದೇ ನಮಗೆ ಗೊತ್ತಾಗುತ್ತಿಲ್ಲ. ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಸಿಬಿಐಗೆ ಪ್ರಕರಣ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ. ನಮಗೂ ಮಗಳ ಸಾವಿಗೆ ನ್ಯಾಯ ಸಿಗುವ ಭರವಸೆ ಕಾಣುತ್ತಿಲ್ಲ. ಹಾಗಾಗಿ ನಾವೂ ಸಿಬಿಐ ತನಿಖೆಗೆ ಒತ್ತಾಯಿಸುತ್ತೇವೆ. ಪ್ರಕರಣದಲ್ಲಿ ಶಾಸಕರೊಬ್ಬರ ಕೈವಾಡವಿರುವುದಂತೂ ಸತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಬೇಗೆಗೆ ಸುಸ್ತಾಗಿದ್ದ ದೆಹಲಿ ಮಂದಿಗೆ ಸ್ವಲ್ಪ ರಿಲ್ಯಾಕ್ಸ್ ನೀಡಿದ ವರುಣ, Video

ವರ್ಷದಲ್ಲಿ ಒಂದು ತಿಂಗಳು ತೆರೆಯುವ ಕೊಟ್ಟಿಯೂರು ದೇವಸ್ಥಾನದ ಬಗ್ಗೆ ಇಲ್ಲಿದೆ ಮಾಹಿತಿ

ಸಿಎಂ ಬದಲಾವಣೆ ಹಳೆ ಸಿನಿಮಾದ ಪೋಸ್ಟರ್‌ ಬದಲಾದ ಹಾಗೇ: ಆರ್‌ ಅಶೋಕ್ ಟೀಕೆ

ಮನುಷ್ಯರಿಗೂ ಇರದ ನಿಯತ್ತು ಈ ಆನೆಗೆ.. ಎಂದೋ ಸಾಕಿದ ಮಾವುತನ ಮರೆಯದ ಆನೆ ಏನು ಮಾಡ್ತು ನೋಡಿ Video

ಮೌನಕ್ಕೆ ಶರಣಾಗಿದ್ದಕ್ಕೆ ಟ್ರೋಲ್‌, ಕೊನೆಗೂ ಪ್ರತಿಕ್ರಿಯಿಸಿದ ಪ್ರದೀಪ್ ಈಶ್ವರ್‌

ಮುಂದಿನ ಸುದ್ದಿ
Show comments