Webdunia - Bharat's app for daily news and videos

Install App

Hubli: ಹುಬ್ಬಳ್ಳಿ ಅಯ್ಯಪ್ಪ ಮಾಲಾಧಾರಿಗಳ ಸಾವಿನ ಸಂಖ್ಯೆ 8 ಕ್ಕೆ ಏರಿಕೆ: ಉಳಿದವರು ಈಗ ಒಬ್ಬರೇ

Krishnaveni K
ಮಂಗಳವಾರ, 31 ಡಿಸೆಂಬರ್ 2024 (10:46 IST)
Photo Credit: X
ಹುಬ್ಬಳ್ಳಿ: ಇಲ್ಲಿ ನಡೆದ ಅಗ್ನಿ ಅವಘಡದಲ್ಲಿ ಮೃತಪಟ್ಟ ಅಯ್ಯಪ್ಪ ಮಾಲಾಧಾರಿಗಳ ಸಂಖ್ಯೆ ಈಗ 8 ಕ್ಕೆ ಏರಿಕೆಯಾಗಿದೆ. ಇದೀಗ ಒಬ್ಬಾತ ಮಾತ್ರ ಬದುಕಿ ಉಳಿದಂತಾಗಿದೆ.

ಘಟನೆಯಲ್ಲಿ ಒಟ್ಟು 9 ಮಂದಿ ಸಿಲುಕಿಕೊಂಡಿದ್ದರು. ಎಲ್ಲರನ್ನೂ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಒಬ್ಬೊಬ್ಬರಾಗಿ ಇದುವರೆಗೆ 8 ಮಂದಿ ಸಾವಿಗೀಡಾಗಿದ್ದಾರೆ. ಇದೀಗ ಒಬ್ಬಾತನ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ.

ನಿನ್ನೆ ರಾತ್ರಿ ಮತ್ತೊಬ್ಬ ಮಾಲಾಧಾರಿ 27 ವರ್ಷದ ತೇಜೇಶ್ವರ್ ಸಾವನ್ನಪ್ಪಿದ್ದರು. ಇಂದು ಬೆಳಿಗ್ಗೆ 42 ವರ್ಷದ ಪ್ರಕಾಶ್ ಬಾರಕೇರ ಎಂಬವರು ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 8 ಕ್ಕೆ ಏರಿಕೆಯಾದಂತಾಗಿದೆ. ಪ್ರಕಾಶ್ ಹುಬ್ಬಳ್ಳಿಯ ಉಣಕಲ್ ನಿವಾಸಿಯಾಗಿದ್ದರು. ಇದರೊಂದಿಗೆ ಕುಟುಂಬಸ್ಥರ ಕಣ್ಣೀರ ಕಟ್ಟೆಯೊಡೆದಿದೆ.

ಹುಬ್ಬಳ್ಳಿಯ ಅಚ್ಚವ್ವನ ಕಾಲೊನಿಯ ಅಯ್ಯಪ್ಪ ಸನ್ನಿಧಿಯಲ್ಲಿ ಭೀಕರ ಸಿಲಿಂಡರ್ ಸ್ಪೋಟಗೊಂಡಿತ್ತು. ಈ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಘಟನೆಯಲ್ಲಿ 9 ಮಂದಿ ಸುಟ್ಟು ಬೆಂದ ಸ್ಥಿತಿಯಲ್ಲಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆ ಸೇರಿದ ಬಳಿಕ ಒಬ್ಬೊಬ್ಬರಾಗಿ ಸಾವನ್ನಪ್ಪುತ್ತಿರುವುದು ಕುಟುಂಬಸ್ಥರ ಧೃತಿಗೆಡಿಸಿದೆ. ಘಟನೆ ಬಳಿಕ ತೀವ್ರ ದುಃಖಗೊಂಡಿರುವ ಈ ಕುಟುಂಬಗಳು ದೇವರ ಮೇಲೆ ನಂಬಿಕೆಯನ್ನೇ ಕಳೆದುಕೊಳ್ಳುವ ಸ್ಥಿತಿಗೆ ತಲುಪಿದೆ. ನಿನ್ನೆ ರಾತ್ರಿ ಮೃತಪಟ್ಟಿದ್ದ ತೇಜೇಶ್ವರ್ ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಅಯ್ಯಪ್ಪ ಮಾಲೆ ಹಾಕುತ್ತಿದ್ದರು. ಇದೀಗ ಮಗನ ಸಾವಿನ ಸುದ್ದಿ ತಿಳಿದು ಕುಟುಂಬಸ್ಥರು ಆಸ್ಪತ್ರೆ ಬಳಿ ಬಂದು ಕಣ್ಣೀರ ಕೋಡಿ ಹರಿಸುತ್ತಿದ್ದಾರೆ. ಇಂದು ಪ್ರಕಾಶ ಬಾರಕೇರ ಮೃತಪಟ್ಟಿದ್ದು ಅವರ ಪುತ್ರನಿಗೆ ಚಿಕಿತ್ಸೆ ಮುಂದುವರಿದಿದೆ. ಅಯ್ಯಪ್ಪ ದಯೆ ತೋರಿಸಿ ಈತನಾದರೂ ಬದುಕುಳಿಯಲಿ ಎನ್ನುವುದು ಕುಟುಂಬಸ್ಥರ ಪ್ರಾರ್ಥನೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments