ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ಜೈಲು ಸೇರಿದ್ದ ಹುಚ್ಚ ವೆಂಕಟ್ಗೆ ನ್ಯಾಯಾಲಯ ಇಂದು ಜಾಮೀನು ನೀಡಿದೆ.
ನಗರದ 17 ನೇ ಸಿಟಿ ಸಿವಿಲ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ಆದರೆ, ನ್ಯಾಯಾಲಯಕ್ಕೆ ಶ್ಯೂರಿಟಿ ನೀಡದ ಹಿನ್ನೆಲೆಯಲ್ಲಿ ಇಂದು ಅವರ ಬಿಡುಗಡೆ ಅನುಮಾನವಾಗಿದೆ ಎಂದು ಮೂಲಗಳು ತಿಳಿಸಿವೆ.
ಡಾ.ಬಿ.ಆರ್. ಅಂಬೇಡ್ಕರ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದರಿಂದ ಹುಚ್ಚ ವೆಂಕಟ್ ವಿರುದ್ಧ ದಲಿತ ಸಂಘಟನೆಗಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದವು.
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ವೆಂಕಟ್ ನಾಳೆ ಬಿಡುಗಡೆಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.