Webdunia - Bharat's app for daily news and videos

Install App

ಮಂಡ್ಯ ಪೊಲೀಸರ ವಶದಲ್ಲಿದ್ದ ಭಾರೀ ಮೊತ್ತದ ಸ್ಫೋಟಕ ಮಾರಾಟ?

Webdunia
ಸೋಮವಾರ, 2 ಆಗಸ್ಟ್ 2021 (19:53 IST)
ಪೊಲೀಸರ ವಶದಲ್ಲಿದ್ದ ಕಲ್ಲು ಗಣಿಗಾರಿಕೆಗೆ ಬಳಸುವ ಸ್ಫೋಟಕಗಳು ನಾಪತ್ತೆಯಾಗಿರುವ ಆಘಾತಕಾರಿ ಘಟನೆ ಮಂಡ್ಯ ಜಿಲ್ಲೆಯಲ್ಲಿ ಸಂಭವಿಸಿದ್ದು, ಪೊಲೀಸರ ವಿರುದ್ಧ ಎಫ್ ಐಆರ್ ದಾಖಲಾಗಿದ್ದು ಮುಚ್ಚಿಟ್ಟು ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
14,400 ಜಿಲೆಟಿನ್ ಕಡ್ಡಿಗಳು, 4 ಸಾವಿರ ಎಲೆಕ್ಟ್ರಿಕ್ ಡಿಟೋನೇಟರ್, 540 ನಾನ್ ಎಲೆಕ್ಟ್ರಿಕ್ ಡಿಟೊನೇಟರ್ಗಳು ಅಕ್ರಮ ಮಾರಾಟವಾಗಿದ್ದು, ಗೋದಾಮು ಮಾಲೀಕ ನಜಿಮುಲ್ಲಾ ಷರೀಫ್ ಎಂಬಾತನಿಂದ ಮಾರಲಾಗಿದೆ ಎಂದು ಆರ್ ಟಿಐ ಕಾರ್ಯಕರ್ತ ರವೀಂದ್ರ ಗಂಭೀರ ಆರೋಪ ಮಾಡಿದ್ದಾರೆ.
ಜನವರಿ 21ರಂದು ಕೆ.ಆರ್.ಪೇಟೆ ಅಕ್ಕಿಹೆಬ್ಬಾಳು ಅಕ್ರಮವಾಗಿ ಸಾಗಿಸುತ್ತಿದ್ದಾಗ ಸ್ಪೋಟಕ ವಶಕ್ಕೆ ಪಡೆದಿದ್ದ ಪೊಲೀಸರು. ವಶ ಪಡಿಸಿಕೊಂಡಿದ್ದ ಸ್ಪೋಟಕಗಳು ಮ್ಯಾಗಜೀನ್ ಹೌಸ್ನಲ್ಲಿ ಪೊಲೀಸರು ಇರಿಸಿದ್ದರು. ಇವುಗಳನ್ನು  ನಾಶಪಡಿಸಲು ಬಿಡಿಡಿಎಸ್ ತಂಡ ಜಿಲ್ಲೆಗೆ ಆಗಮಿಸಿದಾಗ ಪ್ರಕರಣ ಬೆಳಕಿಗೆ ಬಂದಿತ್ತು.
ನಾಜಿಮುಲ್ಲಾ ಷರೀಫ್ ಎಂಬುವರಿಗೆ ಸೇರಿದ್ದ ಮ್ಯಾಗಜೀನ್ ಹೌಸ್ ನಿಂದ ಸ್ಫೋಟಕಗಳನ್ನು ಇರಿಸಲಾಗಿತ್ತು. ಆದರೆ ಕಲ್ಲು ಕ್ವಾರಿ ಮಾಲೀಕರಿಗೆ ಅಕ್ರಮವಾಗಿ ಸ್ಪೋಟಕಗಳನ್ನು ನಾಜಿಮುಲ್ಲಾ ಷರೀಫ್ ಮಾರಿದ್ದಾನೆ. ಜೂನ್ 18ರಂದು ಸ್ಪೋಟಕ ನಾಶ ಪಡಿಸಲು ಬಂದಿದ್ದ ಬಿಡಿಡಿಎಸ್ ತಂಡಕ್ಕೆ ಅಕ್ರಮ ಮಾರಾಟ ಬೆಳಕಿಗೆ ಬಂದಿದೆ ಎಂದು ಅವರು ಆರೋಪಿಸಿದರು.
ನಾಜಿಮುಲ್ಲಾ ಷರೀಫ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿ ನಾಜಿಮುಲ್ಲಾ ಷರೀಫ್ ಪರಾರಿಯಾಗಿದ್ದಾನೆ. ಸ್ಫೋಟಕ ಅಕ್ರಮ ಮಾರಾಟದಲ್ಲಿ ಪೊಲೀಸರು ಶಾಮೀಲಾಗಿರುವ ಶಂಕೆ ಇದ್ದು, ಪ್ರಕರಣ ಮುಚ್ಚಿಹಾಕಲು ವ್ಯವಸ್ಥಿತ ಸಂಚು ನಡೆದಿದೆ ಎಂದು ರವೀಂದ್ರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಇಂಜೆಕ್ಷನ್ ಕೊಡಲು ಗೊತ್ತಿರುವ ಕೆ ಸುಧಾಕರ್‌ಗೆ ದುಡ್ಡು ಹೊಡೆಯುವುದು ಗೊತ್ತು: ಚಲುವರಾಯಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments