Select Your Language

Notifications

webdunia
webdunia
webdunia
webdunia

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹಾ ಎಡವಟ್ಟು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹಾ ಎಡವಟ್ಟು
bangalore , ಮಂಗಳವಾರ, 24 ಮೇ 2022 (20:34 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹಾ ಎಡವಟ್ಟು ಮಾಡಿದ್ದು, ಕಾಮಗಾರಿ ವೇಳೆ ಕಾಂಕ್ರೀಟ್ ಕುಸಿದು 8 ಮಂದಿ ಗಾಯಗೊಂಡಿದ್ದಾರೆ.ಮೀರ್ ಖಾಸಿಂ  ಕಲ್ಕತ್ತ ಅವರ ಸ್ಥಿತಿ ಗಂಭೀರವಾಗಿದೆ. ಆಸಿಬುಲ್, ಶಿವಪ್ರಸಾದ್ , ರೆಹಮಾನ್ ಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೆಂಗಳೂರಿನ ಶ್ರೀನಗರದ ಕಾಳಿದಾದ ಸರ್ಕಲ್ ಬಳಿ 11:15 ಕ್ಕೆ ಘಟನೆ ನಡೆದಿದೆ. ರಾಜಕಾಲುವೆ ದುರಸ್ತಿ ಕಾರ್ಯದ ವೇಳೆ ಕಳಪೆ ಕಾಮಗಾರಿ ಮಾಡುತ್ತಿರುವುದು ಬಯಲಾಗಿದೆ.ಬಿಬಿಎಂಪಿ ರಾಜಕಾಲುವೆಗೆ ಮೇಲೆ ಮೊಲ್ಡಿಂಗ್ ಕಾಮಗಾರಿ ಶುರು ಮಾಡಿಕೊಂಡಿತ್ತು. ಇಂದು ಕಾರ್ಮಿಕರು ಕೆಲಸ ಮಾಡುವ ವೇಳೆಯಲ್ಲಿ ಘಟನೆ ನಡೆದಿದೆ. ರಾಜಕಾಲುವೆ ಕಾಮಗಾರಿ ಸಂದರ್ಭದಲ್ಲೇ ಬ್ರಿಡ್ಜ್ ಕುಸಿದಿದೆ. ಪರಿಣಾಮ 8 ಮಂದಿ ಕಾರ್ಮಿಕರು ಬ್ರಿಡ್ಜ್ ಮೇಲಿಂದ ಬಿದ್ದಿದ್ದಾರೆ. ಹಲವರು ರಾಜಕಾಲುವೆಗೆ ಬಿದ್ದಿರೋ ಶಂಕೆ ವ್ಯಕ್ತವಾಗುತ್ತಿದೆ. ಘಟನೆಯಲ್ಲಿ ಓರ್ವನ ರಕ್ಷಣೆ ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೋಟೆಲ್ ಗಳಿಗೆ ನಿಗದಿತ ವಿದ್ಯುತ್ ಶುಲ್ಕ ವಿನಾಯಿತಿ : ಬೆಸ್ಕಾಂ ಭರವಸೆ