Select Your Language

Notifications

webdunia
webdunia
webdunia
webdunia

ಸ್ಯಾನಿಟೈಸರ್ ಖರೀದಿಯಲ್ಲಿ ಭಾರೀ ಭ್ರಷ್ಟಾಚಾರ? ಹೆಚ್ಡಿಕೆ ಹೇಳಿದ್ದೇನು?

ಸ್ಯಾನಿಟೈಸರ್ ಖರೀದಿಯಲ್ಲಿ ಭಾರೀ ಭ್ರಷ್ಟಾಚಾರ? ಹೆಚ್ಡಿಕೆ ಹೇಳಿದ್ದೇನು?
ರಾಮನಗರ , ಮಂಗಳವಾರ, 28 ಏಪ್ರಿಲ್ 2020 (14:05 IST)
ಜೆಡಿಎಸ್ ವತಿಯಿಂದ ಆಹಾರ ಕಿಟ್ ವಿತರಣೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದ್ದಾರೆ.

ಜೆಡಿಎಸ್ ವತಿಯಿಂದ ರಾಮನಗರ ಮತ್ತು ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬಡ ಕುಟುಂಬಗಳಿಗೆ 1 ಲಕ್ಷಕ್ಕೂ ಅಧಿಕ ಆಹಾರ ಕಿಟ್ ಗಳನ್ನು  ವಿತರಿಸುವ ಕಾರ್ಯಕ್ರಮಕ್ಕೆ  ರಾಮನಗರದ ಮಂಜುನಾಥ ಕಲ್ಯಾಣ ಮಂದಿರದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು.

ಸ್ಯಾನಿಟೈಸರ್ ಖರೀದಿ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಇಂತಹ ಪ್ರಕರಣಗಳಿಗೆ ಸರ್ಕಾರ ಅವಕಾಶ ನೀಡಬಾರದು ಎಂದರು.

ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಗ್ರಾಮೀಣ ಪ್ರದೇಶದ ಜನತೆ ಆಸ್ಪತ್ರೆಗಳಿಗೆ ಬರಲಾಗುತ್ತಿಲ್ಲ. ಹೀಗಾಗಿ ಇಂತಹ ನಾಗರೀಕರ ಅರೋಗ್ಯದ ಬಗ್ಗೆ ಸರ್ಕಾರ ಕಾಳಜಿ ವಹಿಸಬೇಕಾಗಿದೆ ಎಂದರು.

ಈ ವೇಳೆ ಪತ್ನಿ ಹಾಗೂ ರಾಮನಗರ ಶಾಸಕಿ ಅನಿತಾ, ಪುತ್ರ ನಿಖಿಲ್, ಸೊಸೆ ರೇವತಿ ಮತ್ತು ಸ್ಥಳೀಯ ಮುಖಂಡರು ಹಾಜರಿದ್ದರು.

 

Share this Story:

Follow Webdunia kannada

ಮುಂದಿನ ಸುದ್ದಿ

ಡೆಡ್ಲಿ ಕೊರೊನಾಕ್ಕೆ ವ್ಯಕ್ತಿ ಬಲಿ : ರಾಜ್ಯದಲ್ಲೇ ಹೆಚ್ಚು ಸಾವು ಕಂಡ ಜಿಲ್ಲೆ