Webdunia - Bharat's app for daily news and videos

Install App

ಟ್ರಾಫಿಕ್‌ ಫೈನ್‌ ಆಫರ್‌ಗೆ ರಾಜಧಾನಿಯಲ್ಲಿ ಭರ್ಜರಿ ರೆಸ್ಪಾನ್ಸ್‌: ಮೊದಲ ದಿನ ವಸೂಲಿಯಾದ ದಂಡವೆಷ್ಟು ಗೊತ್ತಾ

Sampriya
ಭಾನುವಾರ, 24 ಆಗಸ್ಟ್ 2025 (09:54 IST)
Photo Credit X
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಟ್ರಾಫಿಕ್‌ ಫೈನಲ್‌ ಆಫರ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಂಚಾರ ನಿಯಮ ಉಲ್ಲಂಘನೆಯ ಪ್ರಕರಣಗಳಲ್ಲಿ ಬಾಕಿ ಇರುವ ದಂಡ ಪಾವತಿಗೆ ಶೇ.50 ರಷ್ಟು ರಿಯಾಯಿತಿಯನ್ನು ಪೊಲೀಸ್ ಇಲಾಖೆ ಘೋಷಿಸಿತ್ತು. 

ಮೊದಲ ದಿನವೇ ರಾಜಧಾನಿಯಲ್ಲಿ ವಾಹನ ಸವಾರರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಒಂದೇ ದಿನದಲ್ಲಿ 1.48 ಲಕ್ಷ ಪ್ರಕರಣಗಳು ವಿಲೇವಾರಿಯಾಗಿದೆ. ಇದರಲ್ಲಿ ₹ 4.18 ಕೋಟಿ ದಂಡ ವಸೂಲಿ ಆಗಿದೆ. 

ಸಂಚಾರ ನಿಯಮ ಉಲ್ಲಂಘನೆಯ ಹಳೇ ಪ್ರಕರಣಗಳಲ್ಲಿ ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸೆ.19 ವರೆಗೆ ದಂಡ ಪಾವತಿಗೆ ಸರ್ಕಾರ ಶೇ,50 ರಷ್ಟು ರಿಯಾಯಿತಿ ನೀಡಿದೆ.
ಈ ರಿಯಾಯಿತಿ ಅವಧಿ ಶನಿವಾರದಿಂದ ಆರಂಭವಾಗಿದ್ದು, ಮೊದಲ ದಿನವೇ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 

ದಂಡ ಪಾವತಿಗೆ ನಾಗರಿಕರಿಗೆ ಪೊಲೀಸರು ಅವಕಾಶ ಕಲ್ಪಿಸಿದ್ದು, ಕರ್ನಾಟಕ ಸ್ಟೇಟ್ ಪೊಲೀಸ್ (ಕೆಎಸ್‌ಪಿ) ಆ್ಯಪ್, ಬೆಂಗಳೂರು ಪೊಲೀಸರ ಬಿಟಿಪಿ ಆಸ್ಲಂ ಆ್ಯಪ್, ಕರ್ನಾಟಕ ಒನ್/ಬೆಂಗಳೂರು ಒನ್ ವೆಬ್ ಸೈಟ್‌ನಲ್ಲಿ ದಂಡ ಪಾವತಿಸಬಹುದು. ಅಲ್ಲದೆ, ಸ್ಥಳೀಯ ಸಂಚಾರ ಠಾಣೆ ಹಾಗೂ ಸಂಚಾರ ನಿರ್ವಹಣಾ ಕೇಂದ್ರ (ಟಿಎಂಸಿದಲ್ಲಿ ಕೂಡ ವಾಹನ ನೋಂದಣಿ ಸಂಖ್ಯೆ ಪರಿಶೀಲಿಸಿ ಮಾಹಿತಿ ಪಡೆದು, ದಂಡ ಪಾವತಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಏಲ್ಲೆಲ್ಲಿ ಮಳೆ ಸಾಧ್ಯತೆ ಇಲ್ಲಿದೆ ಮಾಹಿತಿ

ಟ್ರಾಫಿಕ್‌ ಫೈನ್‌ ಆಫರ್‌ಗೆ ರಾಜಧಾನಿಯಲ್ಲಿ ಭರ್ಜರಿ ರೆಸ್ಪಾನ್ಸ್‌: ಮೊದಲ ದಿನ ವಸೂಲಿಯಾದ ದಂಡವೆಷ್ಟು ಗೊತ್ತಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ಮುಂದಿನ ಸುದ್ದಿ
Show comments