Webdunia - Bharat's app for daily news and videos

Install App

ನೆಹರೂ ಹೆಸರಲ್ಲಿ ಹುಕ್ಕಾ ಬಾರ್ ಕಟ್ಟಿಸಿಕೊಳ್ಳಿ: ನಾಲಗೆ ಹರಿಬಿಟ್ಟ ಸಿಟಿ ರವಿ

Webdunia
ಗುರುವಾರ, 12 ಆಗಸ್ಟ್ 2021 (18:18 IST)
ಅಶ್ಲೀಲ ಪದ ಬಳಸಿ ವಿವಾದಕ್ಕೆ ಗುರಿಯಾಗಿದ್ದ ಸಚಿವ ಕೆ.ಎಸ್. ಈಶ್ವರಪ್ಪ ನಂತರ ಇದೀಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ನಾಲಗೆ ಹರಿಬಿಡುವ ಮೂಲಕ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್ ಗೆ ಅನ್ನಪೂರ್ಣೇಶ್ವರಿ ಎಂದು ಮರುನಾಮಕರಣ ಮಾಡುವ ಪ್ರಸ್ತಾಪಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ತಮ್ಮ ಕಚರಿಯಲ್ಲಿ ಇಂದಿರಾ ಕ್ಯಾಂಟೀ
ನ್ ಬೇಕಾದರೂ ತೆರೆಯಲಿ, ಹುಕ್ಕಾ ಬಾರ್ ಆದರೂ ತೆರೆಯಲಿ. ಇಂದಿರಾ ಹೆಸರಲ್ಲಿ ಕ್ಯಾಂಟಿನ್ ತೆರೆಯಿರಿ ಅಥವಾ ನೆಹರೂ ಹೆಸರಲ್ಲಿ ಹುಕ್ಕಾ ಬಾರ್ ಆದರೂ ತೆರೆಯಿರಿ. ಯಾರು ವಿರೋಧಿಸುತ್ತಾರೆ ಎಂದು ಹೇಳಿಕೆ ನೀಡಿದರು. ಆದರ ಕಷ್ಟಕಾಲದಲ್ಲಿರುವ ಬಡವರಿಗೆ ಉಪಹಾರ ನೀಡುವ ಕ್ಯಾಂಟೀನ್ ಗೂ ಹುಕ್ಕಾ ಬಾರ್ ಗೂ ಏನು ಸಂಬಂಧ ಎಂಬುದು ಹೇಳಲಿಲ್ಲ.
ಇದೇ ವೇಳೆ ರಾಜ್ಯದ ಜನರಿಗೆ ಕುಡಿಯುವ ನೀರು ಒದಗಿಸುವ ಮೇಕೆದಾಟು ಯೋಜನೆಗೆ ತಮ್ಮದೇ ಬಿಜೆಪಿಯ ತಮಿಳುನಾಡು ಘಟಕದ ಅಧ್ಯಕ್ಷ ಅಣ್ಣಾಮಲೈ ವಿರೋಧ ವ್ಯಕ್ತಪಡಿಸುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡುವ ಬದಲು ನಾನು ಈ ದೇಶದ ಪರ. ನಮ್ಮ ಪಕ್ಷ ರಾಷ್ಟ್ರೀಯ ಪಕ್ಷ ಎಂದು ಹೇಳುವ ಮೂಲಕ ಪರೋಕ್ಷವಾಗಿ ರಾಜ್ಯದ ನಿಲುವಿನ ವಿರುದ್ಧ ಮಾತನಾಡಿದರು.
ಸಿಟಿ ರವಿ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಿಟಿ ರವಿಗೆ ಸಂಸ್ಕೃತಿ ಅನ್ನೋದೇ ಇಲ್ಲ. ಗೌರವ ಕೊಡೋದು ಗೊತ್ತಿಲ್ಲ. ನಾನು ಅದೇ ತರಹ ವಾಜಪೇಯಿ, ಅಡ್ವಾಣಿ ಬಗ್ಗೆ ಮಾತನಾಡಿದ್ದೇವಾ? ಸ್ವಾತಂತ್ರ್ಯ ಹೋರಾಟ ಏನಾದರೂ ಮಾಡಿದ್ದನಾ ಎಂದು ಪ್ರಶ್ನಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments