Webdunia - Bharat's app for daily news and videos

Install App

ನೆಹರೂ ಹೆಸರಲ್ಲಿ ಹುಕ್ಕಾ ಬಾರ್ ಕಟ್ಟಿಸಿಕೊಳ್ಳಿ: ನಾಲಗೆ ಹರಿಬಿಟ್ಟ ಸಿಟಿ ರವಿ

Webdunia
ಗುರುವಾರ, 12 ಆಗಸ್ಟ್ 2021 (18:18 IST)
ಅಶ್ಲೀಲ ಪದ ಬಳಸಿ ವಿವಾದಕ್ಕೆ ಗುರಿಯಾಗಿದ್ದ ಸಚಿವ ಕೆ.ಎಸ್. ಈಶ್ವರಪ್ಪ ನಂತರ ಇದೀಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ನಾಲಗೆ ಹರಿಬಿಡುವ ಮೂಲಕ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್ ಗೆ ಅನ್ನಪೂರ್ಣೇಶ್ವರಿ ಎಂದು ಮರುನಾಮಕರಣ ಮಾಡುವ ಪ್ರಸ್ತಾಪಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ತಮ್ಮ ಕಚರಿಯಲ್ಲಿ ಇಂದಿರಾ ಕ್ಯಾಂಟೀ
ನ್ ಬೇಕಾದರೂ ತೆರೆಯಲಿ, ಹುಕ್ಕಾ ಬಾರ್ ಆದರೂ ತೆರೆಯಲಿ. ಇಂದಿರಾ ಹೆಸರಲ್ಲಿ ಕ್ಯಾಂಟಿನ್ ತೆರೆಯಿರಿ ಅಥವಾ ನೆಹರೂ ಹೆಸರಲ್ಲಿ ಹುಕ್ಕಾ ಬಾರ್ ಆದರೂ ತೆರೆಯಿರಿ. ಯಾರು ವಿರೋಧಿಸುತ್ತಾರೆ ಎಂದು ಹೇಳಿಕೆ ನೀಡಿದರು. ಆದರ ಕಷ್ಟಕಾಲದಲ್ಲಿರುವ ಬಡವರಿಗೆ ಉಪಹಾರ ನೀಡುವ ಕ್ಯಾಂಟೀನ್ ಗೂ ಹುಕ್ಕಾ ಬಾರ್ ಗೂ ಏನು ಸಂಬಂಧ ಎಂಬುದು ಹೇಳಲಿಲ್ಲ.
ಇದೇ ವೇಳೆ ರಾಜ್ಯದ ಜನರಿಗೆ ಕುಡಿಯುವ ನೀರು ಒದಗಿಸುವ ಮೇಕೆದಾಟು ಯೋಜನೆಗೆ ತಮ್ಮದೇ ಬಿಜೆಪಿಯ ತಮಿಳುನಾಡು ಘಟಕದ ಅಧ್ಯಕ್ಷ ಅಣ್ಣಾಮಲೈ ವಿರೋಧ ವ್ಯಕ್ತಪಡಿಸುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡುವ ಬದಲು ನಾನು ಈ ದೇಶದ ಪರ. ನಮ್ಮ ಪಕ್ಷ ರಾಷ್ಟ್ರೀಯ ಪಕ್ಷ ಎಂದು ಹೇಳುವ ಮೂಲಕ ಪರೋಕ್ಷವಾಗಿ ರಾಜ್ಯದ ನಿಲುವಿನ ವಿರುದ್ಧ ಮಾತನಾಡಿದರು.
ಸಿಟಿ ರವಿ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಿಟಿ ರವಿಗೆ ಸಂಸ್ಕೃತಿ ಅನ್ನೋದೇ ಇಲ್ಲ. ಗೌರವ ಕೊಡೋದು ಗೊತ್ತಿಲ್ಲ. ನಾನು ಅದೇ ತರಹ ವಾಜಪೇಯಿ, ಅಡ್ವಾಣಿ ಬಗ್ಗೆ ಮಾತನಾಡಿದ್ದೇವಾ? ಸ್ವಾತಂತ್ರ್ಯ ಹೋರಾಟ ಏನಾದರೂ ಮಾಡಿದ್ದನಾ ಎಂದು ಪ್ರಶ್ನಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments