Webdunia - Bharat's app for daily news and videos

Install App

ಅಮೃತಹಳ್ಳಿ ಪೊಲೀಸ್ ಠಾಣೆ ಮೇಲೆ ಮಾನವ ಹಕ್ಕುಗಳು ಆಯೋಗ ದಾಳಿ

geetha
ಶನಿವಾರ, 10 ಫೆಬ್ರವರಿ 2024 (15:00 IST)
ಬೆಂಗಳೂರು-ಅಮೃತಹಳ್ಳಿ ಪೊಲೀಸ್ ಠಾಣೆ ಮೇಲೆ ಮಾನವ ಹಕ್ಕುಗಳ ಆಯೋಗದ ಡಿವೈಎಸ್ ಪಿ ಸುಧೀರ್ ಹೆಗ್ಡೆ ನೇತೃತ್ವದ ತಂಡದಿಂದ ದಾಳಿ ಮಾಡಲಾಗಿದೆ.ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಅಧಿಕಾರಿಗಳು ದಾಳಿ ಮಾಡಿದ್ದು,ಆರೋಪಿಯನ್ನು ಅಮೃತಹಳ್ಳಿ ಪೊಲೀಸರು ಆಕ್ರಮವಾಗಿ ಬಂಧನದಲ್ಲಿಟ್ಟಿದ್ದರು.ಯಾಸಿನ್ ಮಹಬೂಬ್ ಖಾನ್ ಎಂಬ ಆರೋಪಿಯನ್ನು ಅಕ್ರಮವಾಗಿ ಠಾಣೆಯಲ್ಲಿ ಇಟ್ಟಿದ್ದರು.ಫೆ.1 ರಿಂದಲೂ ಸುಮಾರು 10 ದಿನಗಳ‌ ಕಾಲ ಪೊಲೀಸರು ಅಕ್ರಮವಾಗಿ ಬಂಧನದಲ್ಲಿ ಇಟ್ಟಿದ್ದರು.ಬಾಂಬೆಯಿಂದ ಆರೋಪಿಯನ್ನು ವಶಕ್ಕೆ ಪಡೆದು ಕರೆತಂದಿದ್ದರು.2023 ರಲ್ಲಿ ಯಾಸಿನ್ ಮಹಬೂಬ್ ಖಾನ್ ಮೇಲೆ ಕಳ್ಳತನ ಕೇಸ್ ದಾಖಲಾಗಿತ್ತು.

ಕೇಸ್ ಆದ ಬಳಿಕ ಬಾಂಬೆಗೆ ನಾಪತ್ತೆಯಾಗಿ ಹೋಟೆಲ್ ನಲ್ಲಿ ಕೆಲಸ ಮಾಡ್ತಾ ಇದ್ದ.ಯಾಸಿನ್ ಬಂಧನಕ್ಕೆ ನ್ಯಾಯಾಲಯ ವಾರೆಂಟ್ ಜಾರಿ ಮಾಡಿತ್ತು ಆದ್ರೆ ವಾರೆಂಟ್ ಮೇಲೆ ಬಾಂಬೆಯಲ್ಲಿ ಆರೋಪಿಯನ್ನು ಬಂಧನ ಮಾಡಿದ್ದರು.ದಾಳಿ ವೇಳೆ ಠಾಣಾ ದಾಖಲಾತಿಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿರೋ ಬಗ್ಗೆ ಉಲ್ಲೇಖ ಮಾಡಿರಲಿಲ್ಲ.ಇತ್ತ ಮನೆಯವರಿಗೂ ವಶಕ್ಕೆ ಪಡೆದಿರೋ ಬಗ್ಗೆ ಪೊಲೀಸರು ಮಾಹಿತಿ ನೀಡಿರಲಿಲ್ಲ ಹೀಗಾಗಿ ಮನೆಯವರು ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದರು.ದೂರು ಪಡೆದು ಠಾಣೆಯ ಮೇಲೆ  ಡಿವೈಎಸ್ಪಿ ಸುಧೀರ್ ಹಗ್ಡೆ ಅಂಡ್ ಟೀಂ ದಾಳಿ ಮಾಡಿದ್ದಾರೆ ಈ ವೇಳೆ ಆರೋಪಿಯನ್ನು ಅಕ್ರಮವಾಗಿ ಇರಿಸಿದ್ದು ಬಯಲಿಗೆ ಬಂದಿದೆ.ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಧೀಶರ ಮುಂದೆ ಅಧಿಕಾರಿಗಳು ಹಾಜರು ಪಡಿಸಲಿದ್ದಾರೆ.ಸದ್ಯ ಅಧಿಕಾರಿಗಳು ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿಗಳನ್ನ ವಿಚಾರಣೆ ಮಾಡ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬೆಂಗಳೂರಿನಲ್ಲಿ ಬಾಳೆ ಎಲೆ ರೇಟು ಬಲು ದುಬಾರಿ

Hebbal Accident: ಹೆಬ್ಬಾಳದಲ್ಲಿ ತಡರಾತ್ರಿ ಸರಣಿ ಅಪಘಾತ: ಲಾರಿ ಚಾಲಕ ದುರ್ಮರಣ

CET Results live: ಕೆಲವೇ ಕ್ಷಣಗಳಲ್ಲಿ ಸಿಇಟ ಫಲಿತಾಂಶ: ಎಲ್ಲಿ, ಹೇಗೆ ಚೆಕ್ ಮಾಡಬೇಕು ಇಲ್ಲಿದೆ ವಿವರ

Viral video: ನಡು ರಸ್ತೆಯಲ್ಲೇ ಮಹಿಳೆ ಜೊತೆ ಬಿಜೆಪಿ ನಾಯಕನ ಕಾಮದಾಟ, ಥೂ ಎಂದ ಜನ

ಮುಂದಿನ ಸುದ್ದಿ
Show comments