ಕಣ್ಮರೆಯಾದ ಮನುಷ್ಯತ್ವ : ಜೀವಕ್ಕಿಂತ ವೀಡಿಯೋ ಮುಖ್ಯ ..!!!

Webdunia
ಮಂಗಳವಾರ, 13 ಸೆಪ್ಟಂಬರ್ 2022 (14:41 IST)
ಆಧುನಿಕ ಜೀವನದ ಭರಾಟೆಯಲ್ಲಿ ಮಾನವೀಯತೆಯು ಅಳಿವಿನಂಚಿಗೆ ಬಂದು ನಿಂತಿರುವುದು ಮಾತ್ರ ಸುಳ್ಳಲ್ಲ. ಇಂದು ಮಾನವೀಯತೆ ಮರೀಚಿಕೆ ಆಗಿರುವುದು ವಿಪರ್ಯಾಸದ ಸಂಗತಿ. ಡಿಜಿಟಲ್​ ದುನಿಯಾ ಒಳಗೆ ಜೀವಿಸುತ್ತಿರುವ ಜನರು ಮಾನವೀಯತೆ ಸಂಪೂರ್ಣ ಮರೆತಿದ್ದಾರೆ ಎನ್ನುವುದಕ್ಕೆ ಈ ಒಂದು ಘಟನೆ ತಾಜಾ ಸಾಕ್ಷಿಯಾಗಿದೆ.
 
ಇಲ್ಲಿ ನಡೆದಿರುವುದು ಇಡೀ ಮನುಕುಲವೇ ತಲೆತಗ್ಗಿಸುವಂತಹ ಘಟನೆ. ನೇಣು ಹಾಕಿಕೊಳ್ಳದಂತೆ ತಡೆಯುವುದನ್ನು ಬಿಟ್ಟು, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಅಮಾನವೀಯ ಘಟನೆ ಹೊಸಪೇಟೆ ತಾಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ.
 
ವಿವರಣೆಗೆ ಬರುವುದಾದರೆ, ಹನುಮನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿನ ಫ್ಲೈಓವರ್​ ಮೇಲಿರುವ ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡು ಯುವಕನೊರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕನನ್ನು ಮಂಜುನಾಥ್ (25) ಎಂದು ಗುರುತಿಸಲಾಗಿದೆ. ನೇಣು ಹಾಕಿಕೊಳ್ಳುವುದನ್ನು ವಿಡಿಯೋ ಮಾಡುತ್ತಿರುವ ಕೆಲವರು ಮಂಜುನಾಥ್​ನನ್ನು ಕಾಪಾಡುವ ಕನಿಷ್ಟ ಪ್ರಯತ್ನವನ್ನೂ ಮಾಡದೇ, ಕುಡಿದು ಹೀಗೆ ಮಾಡಿಕೊಳ್ಳುತ್ತಿದ್ದಾನೆ ಎಂದು ವಿಡಿಯೋದಲ್ಲಿ ಮಾತನಾಡಿಕೊಂಡಿದ್ದಾರೆ.
 
ಮರೆಯಾದ ಮಾನವೀಯತೆಗೆ ಕನ್ನಡಿ ಹಿಡಿದಂತಿದೆ. ಪ್ರಯತ್ನಿಸಿದ್ದರೆ, ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಪ್ಪಿಸಬಹುದಾಗಿತ್ತು. ಜೀವನದಲ್ಲಿ ಜಿಗುಪ್ಸೆಗೊಂಡು ಮಂಜುನಾಥ್​ ನೇಣಿಗೆ ಶರಣಾಗಿದ್ದಾರೆ. ತಾನೇ ಉಟ್ಟಿದ್ದ ಲುಂಗಿಯಿಂದ ವಿದ್ಯುತ್​ ಕಂಬಕ್ಕೆ ನೇಣು ಬಿಗಿದುಕೊಂಡು ಮಂಜುನಾಥ್​ ಸಾವಿಗೆ ಶರಣಾಗಿದ್ದು, ಆತನ ಸಾವು ಮಾನವೀಯತೆಯ ಸಾವಿಗೆ ಉದಾಹರಣಯಂತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ನಿಮಗೆ ತಿಲಕ, ಕೇಸರಿ ಪೇಟ ಕಂಡರೆ ಯಾಕೆ ನಡುಕ: ಆರ್ ಅಶೋಕ್

NEET: ನೀಟ್ ಮರು ಪರೀಕ್ಷೆ ದಿನಾಂಕ ಘೋಷಣೆ: ವಿವರಗಳಿಗೆ ಇಲ್ಲಿ ನೋಡಿ

ಪೆಟ್ರೋಲ್, ಡೀಸೆಲ್ ಬೆಲೆ ಭಾರೀ ಏರಿಕೆ, ಜನ ಸಾಮಾನ್ಯರಿಗೆ ತಟ್ಟಿದ ಬಿಸಿ

ಕರ್ನಾಟಕ ಸಿಎಂ ಬದಲಾವಣೆ ವಿಚಾರ ಏನಾಯ್ತು, ಹೈಕಮಾಂಡ್ ತೀರ್ಮಾನವೇನು

Karnataka Weather: ಇಂದು ಏಳು ಜಿಲ್ಲೆಗಳಲ್ಲಿ ಭಾರೀ ಮಳೆ, ಆರೆಂಜ್ ಅಲರ್ಟ್

ಮುಂದಿನ ಸುದ್ದಿ
Show comments