Publish Date: Sun, 28 Jan 2018 (20:43 IST)
Updated Date: Sun, 28 Jan 2018 (20:45 IST)
ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಬೆಂಗಾವಲು ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಸಚಿವರ ನಡೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.
ದೇವನಹಳ್ಳಿಯ ಸಾವಕನ ಹಳ್ಳಿ ಗೇಟ್ ಬಳಿ ಸಚಿವರ ಬೆಂಗಾವಲು ವಾಹನ ಇನ್ನೋವಾ ಕಾರಿಗೆ ಹಾಗೂ ಬೈಕ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬೈಕ್ ಸವಾರ ಹಾಗೂ ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ.
ಅಪಘಾತ ಸಂಭವಿಸಿದರೂ ಕೇಂದ್ರ ಸಚಿವರು ವಾಹನ ನಿಲ್ಲಿಸದೆ ಹೋಗಿದ್ದಾರೆ. ಮಾನವೀಯತೆ ಮರೆತು ಸ್ಥಳದಿಂದ ಹೋದ ಸಚಿವರ ವಿರುದ್ಧ ಸಾರ್ವಜನಿಕರು ಆಕ್ರೊಶ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.