ಮಾನವೀಯತೆ ಮರೆತ ಅಧಿಕಾರಿಗಳು

Webdunia
ಶನಿವಾರ, 11 ಆಗಸ್ಟ್ 2018 (14:19 IST)
ತನ್ನ ಮಗುವಿನ ಅಂಗವಿಕಲ ವೇತನಕ್ಕಾಗಿ ತಾಯಿಯೋರ್ವಳು ವಿಕಲಚೇತನ ಮಗುವನ್ನು ಕಚೇರಿ ಕೌಂಟರ್ ಕೆಳಗಡೆ ಮಲಗಿಸಿ ಪರಿಪರಿಯಾಗಿ ಕೇಳಿಕೊಂಡ ಘಟನೆ ನಡೆದಿದೆ. ಆದರೂ ಅಧಿಕಾರಿಗಳು ಮಾನವೀಯತೆ ಮರೆತು ನಿರ್ಲಕ್ಷ್ಯ ತೋರಿದ್ದಾರೆ.


ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಾ ಕಚೇರಿಯಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ತನ್ನ ಮಗುವಿನ ಅಂಗವಿಕಲ ವೇತನಕ್ಕಾಗಿ ತಾಯಿಯೋರ್ವಳು ವಿಕಲಚೇತನ ಮಗುವನ್ನು ಕಚೇರಿ ಕೌಂಟರ್ ಕೆಳಗಡೆ ಮಲಗಿಸಿ ಪರಿಪರಿಯಾಗಿ ಕೇಳಿಕೊಂಡಿದ್ದಾರೆ. ಆದರೂ ಅಲ್ಲಿಯ ಸಿಬ್ಬಂದಿ ಕಲ್ಲು ಮನಸ್ಸು ಕರಗಲೇ ಇಲ್ಲ. ಪಾವಸಂದ್ರ ಗ್ರಾಮದ ಮಹಿಳೆ ಕುಮಾರಿ, ತನ್ನ 7 ವರ್ಷದ ಅಂಗವಿಕಲ ಮಗ ಹರೀಶನ ಅಂಗವಿಕಲ ವೇತನಕ್ಕಾಗಿ ಅರ್ಜಿ ಹಾಕಲು ಬಂದಿದ್ರು. ಮಗುವನ್ನು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಸೊಂಟದ ಮೇಲೆ ಎತ್ತಿಕೊಂಡು ಸಿಬ್ಬಂದಿ ಬಳಿ ಮಾಹಿತಿ ಕೇಳಿದ್ದಾಳೆ. ಆದರೂ ಯಾರೂ ಈ ಬಡ ಮಹಿಳೆ ಮಾತು ಕೇಳಿಲ್ಲ. ಸೊಂಟ‌ ಸೋತು ಬಂದಾಗ ಕಚೇರಿ ಕೌಂಟರ್ ಕೆಳಗೆ ಮಗುವನ್ನು ಮಲಗಿಸಿ ಪರಿಪರಿಯಾಗಿ ಕೇಳಿಕೊಂಡಿದ್ದಾಳೆ. ಆಗಲೂ ಸಿಬ್ಬಂದಿ ಅರೆಬರೆ ಮಾಹಿತಿ‌ ನೀಡಿದ್ದಾರೆ.

ಇದನ್ನು ಗಮನಿಸಿದ ಕರ್ನಾಟ ರಕ್ಷಣಾ ವೇದಿಕೆ ಕಾರ್ಯಕರ್ತ ಮಂಜುನಾಥ್, ಮಹಿಳೆ ಸಹಾಯಕ್ಕೆ ಧಾವಿಸಿದ್ದಾರೆ. ತಾಲೂಕಾ ಕಚೇರಿ ಸಿಬ್ಬಂದಿಗಳಿಗೆ ತರಾಟೆಗೆ ತೆಗೆದುಕೊಂಡು ಅಂಗವಿಕಲ ವೇತನದ ಅರ್ಜಿ ಹಾಕಲು ಸಹಾಯ ಮಾಡಿದ್ದಾರೆ. ಈ ನಡುವೆ ಒಂದೂವರೆ ವರ್ಷದ ಹಿಂದೆಯೇ ಮಧ್ಯವರ್ತಿ ಕೆಂಪಣ್ಣ‌ ಎನ್ನುವ ವ್ಯಕ್ತಿ ಅಂಗವಿಕಲ ವೇತನ ಕೊಡಿಸುವುದಾಗಿ ಹೇಳಿ 1300 ರೂ. ವಸೂಲಿ ಮಾಡಿದ್ದಾನಂತೆ. ಆತನಿಂದ ಕೆಲಸ ಆಗದೇ ಇದ್ದಾಗ ವಿಕಲಚೇತನ ಮಗುವನ್ನೇ ಎತ್ತಿಕೊಂಡು ತಾಲೂಕು ಕಚೇರಿಗೆ ಬಂದಿದ್ದು ನೋಡುಗರ ಕರುಳು ಚುರ್ರ್ ಎನಿಸುತಿತ್ತು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ