Webdunia - Bharat's app for daily news and videos

Install App

ರಸ್ತೆಗೆ ಬಂದ ನೂರಾರು ಜನರ ಬೈಕ್ ವಶ

Webdunia
ಭಾನುವಾರ, 19 ಜುಲೈ 2020 (14:22 IST)
ಕೊರೊನಾ ಸೋಂಕು  ದಿನೇ ದಿನೇ ಹೆಚ್ಚುತ್ತಿರುವುದನ್ನು  ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಸಂಡೇ ಲಾಕ್ ಡೌನ್‍ ಉಲ್ಲಂಘನೆ ಮಾಡಿಸದವರ ಬೈಕ್ ವಶಕ್ಕೆ ಪಡೆದುಕೊಳ್ಳಲಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿ  ಜನರು ಬೆಂಬಲ ನೀಡಿ ಬಹುತೇಕರು ಮನೆಯಲ್ಲೇ ಉಳಿದಿದ್ದರೆ, ವಿನಾಕಾರಣ ಹೊರಗೆ ಬಂದಿದ್ದವರ ವಾಹನಗಳನ್ನು ಪೊಲೀಸರು ಮುಲಾಜಿಲ್ಲದೆ ತಮ್ಮ ವಶಕ್ಕೆ ತೆಗೆದುಕೊಂಡಿದ್ದು, ಮದ್ಯಾಹ್ನದವರೆಗೆ 150 ಕ್ಕೂ ಹೆಚ್ಚು ಬೈಕ್ ಗಳನ್ನು ವಶಪಡಿಕೊಳ್ಳಲಾಗಿತ್ತು.

ಲಾಕ್ ಡೌನ್ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗಿನ ಜಾವ 5 ಗಂಟೆವರೆಗೆ ಕರ್ಫ್ಯೂ ಜಾರಿಯಲ್ಲಿದೆ. ವಾಣಿಜ್ಯ  ವಹಿವಾಟಿನ ಎಲ್ಲಾ ಮಳಿಗೆಗಳು  ಸಂಪೂರ್ಣ ಬಂದ್ ಮಾಡಿದೆ.

ಬಳ್ಳಾರಿ ನಗರದ ಬಹುತೇಕ ಪ್ರಮುಖ ರಸ್ತೆಗಳನ್ನು ಪೊಲೀಸರು ಬ್ಯಾರಿಕೇಡ್‍ಗಳನ್ನು ಇರಿಸಿ, ಪಟ್ಟಿ ಕಟ್ಟಿ ಬಂದ್ ಮಾಡಿದ್ದರು. ಆದರೂ ವಿನಾಕಾರಣ ಬೈಕ್ ಗಳನ್ನು ತೆಗೆದುಕೊಂಡು ಬಂದವರನ್ನು ಗಡಗಿ ಚನ್ನಪ್ಪ ವೃತ್ತ,  ಗಾಂಧಿ ನಗರ ಠಾಣೆ ಬಳಿ ತಡೆದು ವಶಪಡಿಸಿಕೊಂಡ ವಾಹನಗಳನ್ನು ಸೆಂಟನರಿ ಹಾಲ್‍ನಲ್ಲಿ ಇರಿಸಲಾಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments