Webdunia - Bharat's app for daily news and videos

Install App

ಬೇಲ್ ಪುರಿ, ತರಕಾರಿ - ಗ್ರಾಮಸ್ಥರಿಗೆ ಮಾರಿದ ಶಾಲೆ ಮಕ್ಕಳು

Webdunia
ಶನಿವಾರ, 14 ಸೆಪ್ಟಂಬರ್ 2019 (19:15 IST)
ಶಿಕ್ಷಕರು ಹಾಗೂ ಅಧಿಕಾರಿಗಳು ಮತ್ತು ಗ್ರಾಮಸ್ಥರಿಗೆ ನೂರಾರು ಮಕ್ಕಳು ಬೇಲ್ ಪುರಿ, ತರಕಾರಿ ಮಾರಾಟ ಮಾಡಿದ ಘಟನೆ ನಡೆದಿದೆ.

ಇದು ನಿಜವಾಗಿ ನಡೆದ ಘಟನೆ. ಮಂಡ್ಯ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ಮಕ್ಕಳ ಸಂತೆಯ ಸಂಭ್ರಮ ಮನೆ ಮಾಡಿತ್ತು.

ಸುಗಮ್ಯ ಶಿಕ್ಷಾ ಕಾರ್ಯಕ್ರಮದ ಅಡಿಯಲ್ಲಿ ನಡೆದ ಮಕ್ಕಳ ಸಂತೆ ಇದಾಗಿತ್ತು. ಸಡಗರ ಸಂಭ್ರಮದಿಂದ ಸಂತೆಯಲ್ಲಿ ಭಾಗವಹಿಸಿ ವ್ಯಾಪಾರ ವ್ಯವಹಾರ ಮಾಡಿದ ಮಕ್ಕಳು ಗಮನ ಸೆಳೆದರು.

ಮಂಡ್ಯ ಕೃಷ್ಣರಾಜಪೇಟೆ ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ನಡೆದ ಮಕ್ಕಳ ಸಂತೆಯಲ್ಲಿ ವ್ಯಾಪಾರ, ವ್ಯವಹಾರ ಜೋರಾಗಿತ್ತು.
ವಿವಿಧ ವೇಷಭೂಷಣಗಳನ್ನು ಧರಿಸಿದ್ದ ಮಕ್ಕಳು ವ್ಯಾಪಾರಿಗಳು ನಾಚುವಂತೆ ಪೈಪೋಟಿಯ ಮೇಲೆ ವ್ಯಾಪಾರ ಮಾಡಿ ಗಮನ ಸೆಳೆದರು.

ಅಣ್ಣಾ ಬನ್ನಿ. ಅಕ್ಕಾ ಬನ್ನೀ ಅಕ್ಕ ನಮ್ಮತ್ರ ಒಳ್ಳೊಳ್ಳೆ ತರಕಾರಿ ಇದೆ ಬನ್ನಿ. ಸೊಪ್ಪು ಒಂದು ಕಂತೆಗೆ ಹತ್ತೇ ರೂಪಾಯಿ ಬನ್ನಿ. ಬೇಲ್ ಪುರಿ, ಚುರುಮುರಿ ತಗೊಳ್ಳಿ ಅದೂ ಹತ್ತೇ ರೂಪಾಯಿ, ಸೇವಂತಿಗೆ ಹೂವನ್ನು ತಗೊಳ್ಳಿ ಮಾರು  ಹತ್ತೇ ರೂಪಾಯಿ ಎಂದು ಗ್ರಾಹಕರನ್ನು ಸೆಳೆದು ವ್ಯಾಪಾರ ಮಾಡುತ್ತಿದ್ದುದು ಕಂಡು ಬಂತು.

ಮಕ್ಕಳ ಸಂತೆಯನ್ನು ಉದ್ಘಾಟಿಸಿದ ಸಂತೆವ್ಯಾಪಾರಿ ರೈತಮಹಿಳೆ ಸುಬ್ಬಮ್ಮ ಮಕ್ಕಳಿಂದ ವಿವಿಧ ವಸ್ತುಗಳನ್ನು ಖರೀದಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

Shocking video: ನೆಗಡಿ ಎಂದು ಬಂದ ಪುಟ್ಟ ಮಗುವಿಗೆ ಸಿಗರೇಟು ಸೇದಲು ಹೇಳಿಕೊಟ್ಟ ವೈದ್ಯ

Video: ನಾವು ಹಿಂದೂಗಳಂತಲ್ಲ, ಕಾಶ್ಮೀರ ಯಾವತ್ತಿದ್ರೂ ನಮ್ಮದೇ, ಶತ್ರುಗಳು ಏನೂ ಮಾಡಕ್ಕಾಗಲ್ಲ: ಪಾಕ್ ಸೇನಾ ಮುಖ್ಯಸ್ಥ

West Bengal: ಪಶ್ಚಿಮ ಬಂಗಾಲದಲ್ಲಿ ವಕ್ಫ್ ಗಲಾಟೆಯಲ್ಲಿ ಸುಟ್ಟು ಕರಕಲಾದ ಸೀರೆಅಂಗಡಿ ವಿಡಿಯೋ ನೋಡಿದ್ರೆ ಕರುಳು ಚುರಕ್ ಅನ್ನುತ್ತೆ

Arecanut price today: ಅಡಿಕೆ ಬೆಳೆಗಾರರಿಗೆ ನೆಮ್ಮದಿ ಕೊಡುವ ಸುದ್ದಿ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments