Webdunia - Bharat's app for daily news and videos

Install App

ಬಿಬಿಎಂಪಿ ಯ ನೂರಾರು ಕಾರ್ಮಿಕರಲ್ಲಿ ಕೆಲಸ ಕಳೆದುಕೊಳ್ಳುವ ಭೀತಿ

Webdunia
ಮಂಗಳವಾರ, 22 ಮಾರ್ಚ್ 2022 (18:24 IST)
ಬಿಬಿಎಂಪಿ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ನಿರ್ವಹಣೆ ಮಾಡುತ್ತಿರುವ ಗುತ್ತಿಗೆ ಸಂಸ್ಥೆಗಳಿಗೆ ಕೋಟ್ಯಾಂತರ ರೂಪಾಯಿ ಬಿಲ್‌ ಪಾವತಿ ಬಾಕಿ‌ ಉಳಿದಿದ್ದು, ನೂರಾರು ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಭೀತಿ ಎದುರಾಗಿದೆ.ಇಂದಿರಾ ಕ್ಯಾಂಟೀನ್‌ಗಳಲ್ಲಿ ಕಡು ಬಡವರು, ಕೂಲಿ ಕಾರ್ಮಿಕರು, ವ್ಯಾಪಾರಿಗಳು, ಆಟೊ, ಟ್ಯಾಕ್ಸಿ ಚಾಲಕರಿಗೆ ರಿಯಾಯಿತಿ ದರದಲ್ಲಿ ಮೂರು ಹೊತ್ತು ಊಟ, ತಿಂಡಿ ನೀಡಲಾಗುತ್ತಿದೆ. ಈ ಕ್ಯಾಂಟೀನ್‌ಗಳನ್ನು ನಿರ್ವಹಣೆ ಮಾಡುತ್ತಿರುವ ಗುತ್ತಿಗೆದಾರರಿಗೆ ಕಳೆದ ಹತ್ತು ತಿಂಗಳಿನಿಂದ 35 ಕೋಟಿ ರೂ. ಬಾಕಿ ಉಳಿಸಿಕೊಳ್ಳಲಾಗಿದೆ. ಕೋಟ್ಯಂತರ ರೂ. ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಕ್ಯಾಂಟೀನ್‌ಗಳನ್ನು ಮುಚ್ಚಲು ಗುತ್ತಿಗೆ ಸಂಸ್ಥೆಗಳು ಚಿಂತನೆ ನಡೆಸಿವೆ. ಇದರಿಂದ ನೂರಾರು ಅಡುಗೆ ಸಿಬ್ಬಂದಿ, ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಭೀತಿ ಎದುರಾಗಿದೆ.ಈ ಕುರಿತು ಪ್ರತಿಕ್ರಿಯಿಸಿದ ಗುತ್ತಿಗೆದಾರರೊಬ್ಬರು, ಸಂಸ್ಥೆಗೆ 10 ತಿಂಗಳಿನಿಂದ 22 ಕೋಟಿ ರೂ. ಹಣ ಬರಬೇಕಿದೆ. ಅಲ್ಲದೇ ಕಳೆದ ವರ್ಷದ ಪೌರಕಾರ್ಮಿಕರ ನಾಲ್ಕು ಕೋಟಿ ರೂ. ಬಿಲ್ ಬಾಕಿ ಇದೆ. ಹೀಗೆ, ಬಿಲ್ ಪಾವತಿ ಮಾಡದಿದ್ದರೆ ಬಾಗಿಲು ಮುಚ್ಚಬೇಕಾಗುತ್ತದೆ ಎಂದರು. ಕೊರೋನಾ ಭೀತಿಯಿಂದಾಗಿ ಹಲವು ಕ್ಯಾಂಟೀನ್‌ಗಳತ್ತ ಜನ ಸುಳಿಯುತ್ತಿಲ್ಲ.  ಹೀಗಾಗಿ, ಹಲವು ಕ್ಯಾಂಟೀನ್‌ಗಳು ಗ್ರಾಹಕರಿಲ್ಲದೆ ಭಣಗುಡುತ್ತಿವೆ. ಪಾಲಿಕೆಯಿಂದ ಬಿಲ್‌ ಪಾವತಿಯಾಗದ ಹಿನ್ನೆಲೆಯಲ್ಲಿ ಗುತ್ತಿಗೆ ಸಂಸ್ಥೆಗಳು ದಿನಸಿ, ತರಕಾರಿ ಪೂರೈಸುತ್ತಿದ್ದವರಿಗೆ ಲಕ್ಷಾಂತರ ರೂ. ಬಾಕಿ ಉಳಿಸಿಕೊಂಡಿವೆ.ಅದೇ ರೀತಿ, ನೀರು, ಒಳಚರಂಡಿ ಸಂಪರ್ಕ ಕಡಿತ ಗುತ್ತಿಗೆ ಸಂಸ್ಥೆಗಳು ಜಲಮಂಡಳಿಗೆ ಕೋಟ್ಯಂತರ ರೂ. ಶುಲ್ಕ ಬಾಕಿ ಉಳಿಸಿಕೊಂಡಿವೆ. ಹಾಗಾಗಿ, ಜಲಮಂಡಳಿಯು ಅಡುಗೆ ಮನೆ ಹಾಗೂ ಕ್ಯಾಂಟೀನ್‌ಗಳಿಗೆ ನೀರು, ಒಳಚರಂಡಿ ಸಂಪರ್ಕವನ್ನು ಕಡಿತಗೊಳಿಸಿದೆ. ಹೀಗೆ ಅದ್ರೆ ಕ್ಯಾಂಟೀನ್ ಮುಚ್ಚಬೇಕಗುತ್ತೆ ಅಂತ ಗುತ್ತಿಗೆದಾರ ತಮ್ಮ ಅಳಲು ತೊಡಿಕೊಂಡಿದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

ಮಹಿಳೆಯರು ಬೋರಲು ಮಲಗಬಾರದೇ ಡಾ ಪದ್ಮಿನಿ ಪ್ರಸಾದ್ ಹೀಗೆ ಹೇಳಿದ್ದರು

ಧರ್ಮಸ್ಥಳ ಕೇಸ್: ಕೊನೆಗೂ ಆ ಮಹತ್ವದ ತನಿಖೆಗೆ ಸಮಯ ಬಂದೇ ಬಿಡ್ತು

ಕೆಎನ್ ರಾಜಣ್ಣ ವಜಾ ಇಫೆಕ್ಟ್: ರಾಹುಲ್ ಗಾಂಧಿ ಕೆಲಸದಿಂದ ಇವರಿಗೆಲ್ಲಾ ನಡುಕ ಶುರು

ಮುಂದಿನ ಸುದ್ದಿ
Show comments