Webdunia - Bharat's app for daily news and videos

Install App

ಯೂನಿಸ್ ಚಂಡಮಾರುತದ ಅಬ್ಬರ: ಬ್ರಿಟನ್ ನಲ್ಲಿ 13 ಮಂದಿ ಮೃತ್ಯು

Webdunia
ಭಾನುವಾರ, 20 ಫೆಬ್ರವರಿ 2022 (20:12 IST)
ಪೂರ್ವ ಯುರೋಪ್‌ನಾದ್ಯಂತ ವಿನಾಶಕಾರಿಯಾಗಿ ಪರಿಣಮಿಸಿರುವ ಯೂನಿಸ್ ಚಂಡಮಾರುತದ ಅಬ್ಬರಕ್ಕೆ ನಲುಗಿರುವ ಬ್ರಿಟನ್‌ನಲ್ಲಿ ಕನಿಷ್ಟ 13 ಮಂದಿ ಮೃತಪಟ್ಟಿದ್ದು ಬೃಹತ್ ಮರಗಳು ಉರುಳಿಬಿದ್ದು ವಿದ್ಯುತ್ ಪೂರೈಕೆ ಅಸ್ತವ್ಯಸ್ತಗೊಂಡಿದೆ. ಕನಿಷ್ಟ 2 ಲಕ್ಷ ಮನೆಗಳಿಗೆ ವಿದ್ಯುತ್ ಪೂರೈಕೆ ಕಡಿತಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
 ಬ್ರಿಟನ್, ಐರ್ಲ್ಯಾಂಡ್, ನೆದರ್ಲ್ಯಾಂಡ್, ಬೆಲ್ಜಿಯಂ, ಜರ್ಮನಿ ಮತ್ತು ಪೋಲಂಡ್ನಲ್ಲಿ ಭಾರೀ ಗಾಳಿಯೊಂದಿಗೆ ಬೀಸಿದ ಚಂಡಮಾರುತದ ಅಬ್ಬರಕ್ಕೆ ಸಮುದ್ರದಲ್ಲಿ ಬೃಹತ್ ಅಲೆಗಳು ಎದ್ದಿವೆ. ಬೃಹತ್ ಮರಗಳು ಬುಡಸಹಿತ ಉರುಳಿ ಬಿದ್ದರೆ ಕಸಕಡ್ಡಿ ಮತ್ತಿತರ ತ್ಯಾಜ್ಯಗಳು ಸುಂಟರಗಾಳಿಯಂತೆ ಆಕಾಶದಲ್ಲಿ ಹಾರಾಡುತ್ತಿದ್ದವು ಎಂದು ವರದಿಯಾಗಿದೆ. ಬ್ರಿಟನ್‌ನಲ್ಲಿ  2 ಲಕ್ಷಕ್ಕೂ ಅಧಿಕ ಮನೆಗಳಿಗೆ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ಗಂಟೆಗೆ 122 ಮೈಲು ವೇಗದಲ್ಲಿ ಬೀಸಿದ ಗಾಳಿಯಿಂದಾಗಿ ಸಾರಿಗೆ ವ್ಯವಸ್ಥೆ ಮೊಟಕುಗೊಂಡಿದೆ. 
ರೈಲಿನಲ್ಲಿ ಸಂಚರಿಸದಂತೆ ರೈಲ್ವೇ ಇಲಾಖೆ ಜನತೆಗೆ ಮುನ್ನೆಚ್ಚರಿಕೆ ರವಾನಿಸಿದೆ. ನೆದರ್ಲ್ಯಾಂಡಿನಲ್ಲಿ ರೈಲ್ವೇ ನೆಟ್ವರ್ಕ್ ಅಸ್ತವ್ಯಸ್ತವಾಗಿದೆ. ಫ್ರಾನ್ಸ್ ಮತ್ತು ಬ್ರಿಟನ್‌ನಿಂದಸಂಚರಿಸುವ ಅಂತರಾಷ್ಟ್ರೀಯ ಹೈಸ್ಪೀಡ್ ರೈಲ್ವೇ ಸೇವೆಗಳಾದ ಯುರೋಸ್ಟಾರ್ ಮತ್ತು ಥಾಲಿಸ್ ಇಂಟರ್ನ್ಯಾಷನಲ್ ಸೇವೆ ಸಂಪೂರ್ಣ ಸ್ಥಗಿತಗೊಂಡಿದೆ. ಫ್ರಾನ್ಸ್ನಲ್ಲೂ ರೈಲ್ವೇ ಸೇವೆ ವ್ಯತ್ಯಯಗೊಂಡಿದ್ದು ಸುಮಾರು 75,000 ಮನೆಗಳಿಗೆ ವಿದ್ಯುತ್ ಪೂರೈಕೆ ಮೊಟಕುಗೊಂಡಿದೆ.
ಈ ಮಧ್ಯೆ, ಶನಿವಾರ ಇಂಗ್ಲಂಡಿನ ದಕ್ಷಿಣ ತೀರ ಹಾಗೂ ವೇಲ್ಸ್‌ನ ದಕ್ಷಿಣ ಭಾಗದಲ್ಲಿ ಶನಿವಾರ ಹಳದಿ ಎಚ್ಚರಿಕೆಯ ಸಂದೇಶ ಘೋಷಿಸಲಾಗಿದ್ದು , ಸಾಧಾರಣದಿಂದ ಕಡಿಮೆ ತೀವ್ರತೆಯ ಗಾಳಿ ಬೀಸುವ ಮುನ್ನೆಚ್ಚರಿಕೆಯನ್ನು ಬ್ರಿಟನ್‌ನ ಹವಾಮಾನ ಇಲಾಖೆ ನೀಡಿದೆ. ನವೆಂಬರ್ನಲ್ಲಿ ಬ್ರಿಟನ್‌ನಲ್ಲಿ  ಆರ್ವೆನ್ ಚಂಡಮಾರುತದ ಹಾವಳಿಯಿಂದ ಸುಮಾರು 1 ಮಿಲಿಯನ್ ಮನೆಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಡಾನ್‌ನಲ್ಲಿ ಭಯಾನಕ ಭೂಕುಸಿತ: ಗ್ರಾಮವೇ ಸರ್ವನಾಶ, ಸಾವಿರಾರು ಮಂದಿ ಸಾವು

ಸಚಿವ ಸ್ಥಾನ ಕಳೆದುಕೊಂಡ ರಾಜಣ್ಣ ನೂರಕ್ಕೆ ನೂರರಷ್ಟು ಬಿಜೆಪಿ ಸೇರುತ್ತಾರೆ: ಶಾಸಕ ಬಾಲಕೃಷ್ಣ ಹೊಸ ಬಾಂಬ್‌

ಧರ್ಮಸ್ಥಳ ವಿಚಾರದಲ್ಲಿ ಆರ್‌ಎಸ್‌ಎಸ್ ವರ್ಸಸ್ ಆರ್‌ಎಸ್‌ಎಸ್ ಹೋರಾಟ: ಪ್ರಿಯಾಂಕ್‌ ಖರ್ಗೆ ಟಾಂಗ್‌

ಪ್ರವಾಹ ಪರಿಸ್ಥಿತಿ ತಡೆಗೆ ಪಾಕ್‌ ರಕ್ಷಣಾ ಸಚಿವ ನೀಡಿದ ಸಲಹೆಗೆ ವಿಶ್ವವೇ ಶಾಕ್‌

ಕೆ ಕವಿತಾ ಅಮಾನತು: ಇದೊಂದು ದೊಡ್ಡ ನಾಟಕ ಎಂದ ಕಾಂಗ್ರೆಸ್‌ ಸಂಸದ ಅನಿಲ್ ಕುಮಾರ್‌

ಮುಂದಿನ ಸುದ್ದಿ
Show comments