Webdunia - Bharat's app for daily news and videos

Install App

24 ಗಂಟೆಗಳಲ್ಲಿ ಕರಾವಳಿ ಭಾಗಗಳಿಗೆ ಚಂಡಮಾರುತ:ಎಚ್ಚರಿಕೆ

Webdunia
ಮಂಗಳವಾರ, 22 ಮೇ 2018 (15:56 IST)
ಮುಂದಿನ 24 ಗಂಟೆಗಳಲ್ಲಿ ದೇಶದ ಕರಾವಳಿ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಚಂಡ ಮಾರುತದ ಪರಿಣಾಮ ಸಮುದ್ರದಲ್ಲಿ ಭಾರಿ ಅಲೆಗಳು ಏಳುವ ಕಾರಣ ಮೀನುಗಾರಿಕೆ ತೆರಳದಂತೆ ಇಲಾಖೆ ಎಚ್ಚರಿಕೆ ನೀಡಿದೆ.
ಅಡೆನ್ ಕೊಲ್ಲಿಯಲ್ಲಿ ಕೇಂದ್ರಿಕೃತವಾಗಿರುವ ಸಾಗರ್ ಚಂಡಮಾರುತದ ಕುರಿತಂತೆ ದಕ್ಷಿಣದ ರಾಜ್ಯಗಳು ಹಾಗೂ ಲಕ್ಷದ್ವೀಪದ ಜನತೆಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
 
ಭಾರತೀಯ ಹವಾಮಾನ ಇಲಾಖೆ ಇಂದು ತಮಿಳುನಾಡು, ಕೇರಳ, ಕರ್ನಾಟಕ, ಗೋವಾ, ಮಹಾರಾಷ್ಟ್ರ ಮತ್ತು ಲಕ್ಷದ್ವೀಪ ದ್ವೀಪಸಮೂಹಗಳಿಗೆ  ಚಂಡಮಾರುತ ಅಪ್ಪಳಿಸುವ ಸಾದ್ಯತೆ ಕುರಿತಂತೆ ಎಚ್ಚರಿಕೆ ನೀಡಿದೆ.
 
ಸಧ್ಯ ಅಡೆನ್ ಕೊಲ್ಲಿಯಲ್ಲಿ ಕೇಂದ್ರೀಕೃತವಾಗಿರುವ ಚಂಡಮಾರುತವು ಮಾರು 390 ಕಿಮೀ ಪೂರ್ವಕ್ಕೆ ಯೆಮನ್ ನ ಏಡೆನ್ ನಗರದ ಈಶಾನ್ಯ ಮತ್ತು 560 ಕಿಮೀ ಸೊಕೊಟ್ರಾ ದ್ವೀಪಗಳ ಗಡಿ ಭಾಗದಲ್ಲಿ ನೆಲೆಯಾಗಿದೆ.
 
ಮುಂದಿನ 12 ಗಂಟೆಗಳಲ್ಲಿ ಇದು ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದ್ದು ಮುಂದಿನ 48 ಗಂಟೆಗಳಲ್ಲಿ ಪಶ್ಚಿಮ ಕೇಂದ್ರ ಭಾಗ, ನೈರುತ್ಯ ಅರೇಬಿಯನ್ ಸಮುದ್ರದಲ್ಲಿ ಮೀನುಗಾರರು ಮೀನುಗಾರಿಕೆಗೆ ತೆರಳಬಾರದೆಂದು ಇಲಾಖೆ ಎಚ್ಚರಿಸಿದೆ.
 
ಮುಂದಿನ 24 ಗಂಟೆಗಳಲ್ಲಿ ದೇಶದ ಕರಾವಳಿ ಭಾಗಗಳಿಗೆ ಚಂಡಮಾರುತ ಅಪ್ಪಳಿಸುವ ಅಪಾಯವಿದೆ ಎಂದ ಇಲಾಖೆ ಚಂಡಮಾರುತದ ಕಾರಣ ಸಮುದ್ರದಲ್ಲಿ ದೊಡ್ಡ ಪ್ರಮಾಣದ ಅಲೆಗಳೇಳುವ ಸಾಧ್ಯತೆ ಇದೆ ಎಂದಿದೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments