Webdunia - Bharat's app for daily news and videos

Install App

ಪತ್ನಿ ಬಾಯಿಗೆ ವಿಷ ಸುರಿದು ಪತಿ ಪರಾರಿ

Webdunia
ಮಂಗಳವಾರ, 3 ಮೇ 2016 (17:23 IST)
ತವರು ಮನೆಯಿಂದ ಹಣ ತರಲಿಲ್ಲ ಎಂದು ಮಡದಿಯನ್ನು ಥಳಿಸಿ ಕೊಲೆ ಮಾಡಿರುವ ಹೇಯ ಕೃತ್ಯ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ಆರೋಪಿ ದಾವಣಗೆರೆ ಜಿಲ್ಲೆಯ ಗೊಲ್ಲರಹಟ್ಟಿ ನಿವಾಸಿ ಶಿವಕುಮಾರ್ ನಾಯ್ಕ ಎಂದು ತಿಳಿದು ಬಂದಿದ್ದು, ಆಗಾಗ ತನ್ನ ಮಡದಿ ಸುಮಾಗೆ ತವರು ಮನೆಯಿಂದ ಹಣ ತರುವಂತೆ ಹಿಂಸೆ ನೀಡುತ್ತಿದ್ದ. ಕಳೆದ ರಾತ್ರಿ ಸಹ ತನ್ನ ಮಡದಿಯನ್ನು ಹಿಗ್ಗಾಮುಗ್ಗಾ ಥಳಿಸಿದ ಆತ ಬಲವಂತವಾಗಿ ಬಾಯಿಗೆ ವಿಷ ಸುರಿದ್ದಿದ್ದಾನೆ. ಬಳಿಕ ತನ್ನ ಮಡದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಪರಾರಿಯಾಗಿದ್ದಾನೆ.
 
ಸುಮಾ ಆಸ್ಪತ್ರೆಯಲ್ಲಿ ದಾಖಲಾಗಿರುವ ವಿಷಯ ತವರು ಮನೆಗೆ ತಲುಪಿದ್ದು, ಅವರ ಕುಟಂಬಸ್ಥರು ಆಸ್ಪತ್ರೆಗೆ ಬರುವುದರಲ್ಲಿ ಆಕೆ ಮೃತಪಟ್ಟಿದ್ದರು.
 
ಈ ದಂಪತಿಗೆ ಒಂದು ಗಂಡು ಮತ್ತು ಒಂದು ಹೆಣ್ಣು ಮಗು ಇದೆ. ಆರೋಪಿ ಶಿವಕುಮಾರ್ ಈ ಹಿಂದೆ ಕೆಎಸ್‍ಆರ್‍ಟಿಸಿ ಉದ್ಯೋಗಿಯಾಗಿದ್ದು, ಮದುವೆಯ ನಂತರ ಕೆಲಸಕ್ಕೆ ರಾಜೀನಾಮೆ ನೀಡಿ ವ್ಯವಸಾಯದಲ್ಲಿ ತೊಡಗಿದ್ದ ಎಂದು ತಿಳಿದು ಬಂದಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments