Webdunia - Bharat's app for daily news and videos

Install App

ಮಡದಿಗೆ ಅನೈತಿಕ ಸಂಬಂಧದ ಅನುಮಾನದ ಮೇರೆಗೆ ಕೊಲೆಗೈದ ಪತಿ

Webdunia
ಗುರುವಾರ, 9 ನವೆಂಬರ್ 2023 (09:30 IST)
ಚಾಮರಾಜನಗರ: ಪತ್ನಿಗೆ ಅನೈತಿಕ ಸಂಬಂಧವಿದೆಯೆಂಬ ಅನುಮಾನದ ಹಿನ್ನಲೆಯಲ್ಲಿ ಆಕ್ರೋಶಗೊಂಡ ಪತಿ ಆಕೆಯನ್ನು ಕೊಲೆ ಮಾಡಿದ ಘಟನೆ ನಡೆದಿದೆ.

ವೃತ್ತಿಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಆಗಿರುವ ಪತಿ ಕಿಶೋರ್ ಹೊಸಕೋಟೆಯಲ್ಲಿರುವ ಪತ್ನಿಯ ತವರು ಮನೆಗೆ ತೆರಳಿ ಈ ಕೃತ್ಯವೆಸಗಿದ್ದಾನೆ. ದಾರಿ ಮಧ್ಯೆ ಪತ್ನಿಗೆ ಸುಮಾರು 150 ಬಾರಿ ಕರೆ ಮಾಡಿದ್ದಾನೆ. ಆದರೆ ಪತ್ನಿ ಇದಕ್ಕೆ ಉತ್ತರಿಸಿರಲಿಲ್ಲ.

ವಿಪರ್ಯಾಸವೆಂದರೆ ಹೆಂಡತಿಗೆ 11 ದಿನಗಳ ಹಿಂದಷ್ಟೇ ಹೆರಿಗೆಯಾಗಿತ್ತು. ದಂಪತಿಗೆ ನವಜಾತ ಗಂಡುಮಗುವಾಗಿತ್ತು. ಪತ್ನಿಯ ತವರು ಮನೆಗೆ ಬಂದ ಕಿಶೋರ್ ಮೊದಲು ತಾನು ವಿಷ ಸೇವಿಸಿ ಬಳಿಕ ಆಕೆಯ ಕೋಣೆ ಬಾಗಿಲು ಭದ್ರಪಡಿಸಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಅನುಮಾನಗೊಂಡ ಅತ್ತೆ ಬಾಗಿಲು ಬಡಿದಾಗ ಉತ್ತರ ಬಂದಿರಲಿಲ್ಲ. ಕೆಲವು ನಿಮಿಷಗಳ ಬಳಿಕ ಕಿಶೋರ್ ನಾನು ಪತ್ನಿಯನ್ನು ಕೊಂದು ಬಿಟ್ಟೆ ಎನ್ನುತ್ತಾ ಹೊರಗೆ ಓಡಿ ಬಂದಿದ್ದ. ಇದೀಗ ಆರೋಪಿ ಕಿಶೋರ್ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆತ ಗುಣವಾದ ಬಳಿಕ ಪೊಲೀಸರು ವಶಕ್ಕೆ ಪಡೆಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments