Webdunia - Bharat's app for daily news and videos

Install App

ಬೆಂಗಳೂರಿಗೆ ಹೋಗಬೇಕೆಂದು ಹಠ ಹಿಡಿದ ಪತ್ನಿಯನ್ನು ಕೊಂದ ಭೂಪ

Webdunia
ಮಂಗಳವಾರ, 13 ನವೆಂಬರ್ 2018 (09:48 IST)
ಬೆಂಗಳೂರು: ಊರಿನ ಸಹವಾಸ ಬೇಡ, ಬೆಂಗಳೂರಿಗೆ ಹೋಗಿ ಸೆಟ್ಲ್ ಆಗೋಣ ಎಂದು ಹಠ ಹಿಡಿಯುತ್ತಿದ್ದ ಪತ್ನಿಯ ಕತ್ತು ಹಿಸುಕಿ ಪತಿ ಕೊಲೆ ಮಾಡಿದ ಘಟನೆ ಕಡೂರು ತಾಲೂಕಿನಲ್ಲಿ ನಡೆದಿದೆ.

ಬೆಂಗಳೂರಿಗೆ ಹೋಗುವ ವಿಚಾರದಲ್ಲಿ ಪತಿ ಮಹೇಶ್ ನಾಯ್ಕ್ ಮತ್ತು ಪತ್ನಿ ಜಯೋತಿ ಬಾಯಿ ನಡುವೆ ವಾಗ್ವಾದ ನಡೆದಿದ್ದು, ಇದು ತಾರಕಕ್ಕೇರಿ ಪತಿ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಇಬ್ಬರೂ ಬೆಂಗಳೂರಿನಲ್ಲೇ ನೆಲೆಸಿದ್ದಾರೆ. ಆದರೆ ದೀಪಾವಳಿ ಹಬ್ಬಕ್ಕೆಂದು ಊರಿಗೆ ತೆರಳಿದ್ದ ದಂಪತಿ ಮರಳಿ ಬೆಂಗಳೂರಿಗೆ ಮರಳುವ ವಿಚಾರದಲ್ಲಿ ಮನಸ್ತಾಪ ಉಂಟಾಗಿದೆ. ಬೆಂಗಳೂರಿಗೆ ಹೋಗುವುದು ಬೇಡ ಎಂಬುದು ಪತಿಯ ನಿಲುವಾದರೆ, ಪತ್ನಿ ಊರು ಬೇಡ ಬೆಂಗಳೂರೇ ಬೇಕು ಎಂದು ಜಗಳವಾಡಿದ್ದಳು. ಈ ದಂಪತಿಗೆ ಇಬ್ಬರು ಮಕ್ಕಳೂ ಇದ್ದು, ಅವರನ್ನು ಅಂಗಡಿಗೆ ಕಳುಹಿಸಿ ಈ ಕೃತ್ಯವೆಸಗಲಾಗಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ