Select Your Language

Notifications

webdunia
webdunia
webdunia
webdunia

ಪತ್ನಿಯನ್ನು ನಡುರಸ್ತೆಯಲ್ಲೇ ಕೊಲೆಗೈದ ಪತಿ!

ಪತ್ನಿಯನ್ನು ನಡುರಸ್ತೆಯಲ್ಲೇ ಕೊಲೆಗೈದ ಪತಿ!
ರಾಮನಗರ , ಶನಿವಾರ, 11 ಡಿಸೆಂಬರ್ 2021 (14:01 IST)
ರಾಮನಗರ : ಗಲಾಟೆ ಮಾಡಿಕೊಂಡು ಅಕ್ಕನ ಮನೆಗೆ ಬಂದಿದ್ದ ಪತ್ನಿಯನ್ನು ನಡುರಸ್ತೆಯಲ್ಲೇ ಪತಿ ಹತ್ಯೆಗೈದಿರುವ ಘಟನೆ ಅರಳಿಮರದೊಡ್ಡಿ ಗ್ರಾಮದಲ್ಲಿ ನಡೆದಿದೆ.

ರಾಮನಗರ ತಾಲೂಕಿನ ಅರಳಿಮರದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಂಗಳಗೌರಿ ಕೊಲೆಯಾದ ಮಹಿಳೆ. ಆರೋಪಿ ಸತೀಶ್ ಪರಾರಿಯಾಗಿದ್ದಾನೆ.

ಆನಮಾನಹಳ್ಳಿ ನಿವಾಸಿ ಪತಿ ಸತೀಶ್ ಜೊತೆ ಕಳೆದ ಒಂದು ವಾರದ ಹಿಂದೆ ಮಂಗಳಗೌರಿ ಗಲಾಟೆ ಮಾಡಿಕೊಂಡು ಅಕ್ಕನ ಮನೆಗೆ ಬಂದಿದ್ದರು. ನಂತರ ಮಂಗಳಗೌರಿ ರಾಮನಗರ ಮಧುರಾ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ರಾತ್ರಿ ಮಂಗಳಗೌರಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಸತೀಶ್ ಚಾಕುವಿನಿಂದ ಹಲ್ಲೆ.

ಹಲ್ಲೆಯಿಂದ ಗಂಭೀರ ಗಾಯಗೊಂಡಿದ್ದ ಮಂಗಳಗೌರಿ ಸ್ಥಳದಲ್ಲೇ ಅಸುನೀಗಿದ್ದಾರೆ. ರಾಮನಗರ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಮಂಗಳಗೌರಿಯ ಮೃತದೇಹ ರವಾನೆ ಮಾಡಲಾಗಿದೆ. ರಾಮನಗರ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಚುನಾವಣೆಯಲ್ಲಿ 350ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ : ಯೋಗಿ