ಪತಿ ಕಾಲು ಕಟು ಮಾಡಿ ಪತ್ನಿ ಕೈಗೆ ಕೊಟ್ಟ ಸಿಬ್ಬಂದಿ

Webdunia
ಮಂಗಳವಾರ, 6 ಸೆಪ್ಟಂಬರ್ 2022 (16:20 IST)
ಆಸ್ಪತ್ರೆಯ ಸಿಬ್ಬಂದಿ ಪತ್ನಿಯ ಕೈಗಿಟ್ಟ ಪ್ರಸಂಗವೊಂದು ನಡೆದಿದೆ. ಮಂಡ್ಯದ ಮಿಮ್ಸ್​ ಆಸ್ಪತ್ರೆಯಲ್ಲಿ ಇಂಥದ್ದೊಂದು ಎಡವಟ್ಟು ಸಂಭವಿಸಿದೆ. ಪದೇಪದೆ ವಿವಾದಗಳ ಕೇಂದ್ರಬಿಂದು ಆಗುತ್ತಿರುವ ಮಿಮ್ಸ್​ ಇದೀಗ ಮತ್ತೊಂದು ವಿವಾದಕ್ಕೆ ಈಡಾಗಿದೆ ಎನ್ನಲಾಗುತ್ತಿದೆ.
ಗ್ಯಾಂಗ್ರೀನ್​ಗೆ ಒಳಗಾಗಿದ್ದ ಮಂಡ್ಯದ ಕೀಲಾರ ಗ್ರಾಮದ ಪ್ರಕಾಶ್ ಎಂಬವರು ಚಿಕಿತ್ಸೆಗಾಗಿ ಮಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ನೀಡಿದ ವೈದ್ಯರು ಗ್ಯಾಂಗ್ರೀನ್​ಗೆ ಒಳಗಾಗಿದ್ದ ಕಾಲನ್ನು ಶಸ್ತ್ರಚಿಕಿತ್ಸೆ ಮಾಡಿ ತೆಗೆದಿದ್ದರು. ಆದರೆ ಅದಾದ ಬಳಿಕ ಆಸ್ಪತ್ರೆ ಸಿಬ್ಬಂದಿ ಕತ್ತರಿಸಲಾಗಿದ್ದ ಕಾಲಿನ ಭಾಗವನ್ನು ತಂದು ಪ್ರಕಾಶ್ ಅವರ ಪತ್ನಿ ಭಾಗ್ಯಮ್ಮ ಅವರಿಗೆ ನೀಡಿದ್ದರು.
 
ಅದನ್ನು ಸ್ವೀಕರಿಸಿದ ಭಾಗ್ಯಮ್ಮ ತಬ್ಬಿಬ್ಬಾಗಿದ್ದು, ಏನು ಮಾಡಬೇಕು ಎಂದು ತೋಚದೆ ಗಂಡನ ಕಾಲನ್ನು ಹಿಡಿದು ಅತ್ತಿದ್ದರು. ದಾಖಲಾದ ಮೂರು ದಿನಗಳ ಬಳಿಕ ಕತ್ತರಿಸಿದ ಕಾಲನ್ನು ನೀಡಿದ್ದ ಆಸ್ಪತ್ರೆಯವರು, ಅದನ್ನು ಎಲ್ಲಾದರೂ ಮಣ್ಣು ಮಾಡುವಂತೆ ಭಾಗ್ಯಮ್ಮನಿಗೇ ಹೇಳಿದ್ದಾರೆ ಎನ್ನಲಾಗಿದೆ. ತಾವೇ ಮಣ್ಣು ಮಾಡಿದರೆ ಸಾವಿರಾರು ರೂಪಾಯಿ ನೀಡಬೇಕು ಎಂದು ಆಸ್ಪತ್ರೆಯವರು ಕೇಳಿದ್ದಾರೆ ಎಂದು ಭಾಗ್ಯಮ್ಮ ಆರೋಪಿಸಿದ್ದು, ಮಿಮ್ಸ್​ ಸಿಬ್ಬಂದಿ ನಡೆ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿದ್ದ ಎರಡೂ ಮಸೂದೆ ವಾಪಸ್‌, ಯಾವುದು ಗೊತ್ತಾ

ಬಳ್ಳಾರಿ ಶೂಟೌಟ್ ಪ್ರಕರಣ: ತನಿಖೆಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ರಾಜ್ಯ ಸರ್ಕಾರ

ಹಿ.ಪ್ರದೇಶ: ಕಂದಕಕ್ಕೆ ಉರುಳಿದ ಖಾಸಗಿ ಬಸ್‌, 9 ಮಂದಿ ಸಾವು, 40ಮಂದಿಗೆ ಗಾಯ

ಮಮತಾ ಬ್ಯಾನರ್ಜಿ ಹೆಣ್ಣು ಹುಲಿ, ಶರಣಾಗಲ್ಲ: ಮೆಹಬೂಬಾ ಮುಫ್ತಿ

ಆತ್ಮಹತ್ಯೆಗೆ ಶರಣಾದ ಡೆಂಟಲ್ ವಿದ್ಯಾರ್ಥಿನಿ, ಇದೇ ಕಾರಣಕ್ಕೆ ಪ್ರಾಣ ಕಳೆದುಕೊಂಡ್ಳ ಯುವತಿ

ಮುಂದಿನ ಸುದ್ದಿ
Show comments