Webdunia - Bharat's app for daily news and videos

Install App

ಪತಿ ಕಾಲು ಕಟು ಮಾಡಿ ಪತ್ನಿ ಕೈಗೆ ಕೊಟ್ಟ ಸಿಬ್ಬಂದಿ

Webdunia
ಮಂಗಳವಾರ, 6 ಸೆಪ್ಟಂಬರ್ 2022 (16:20 IST)
ಆಸ್ಪತ್ರೆಯ ಸಿಬ್ಬಂದಿ ಪತ್ನಿಯ ಕೈಗಿಟ್ಟ ಪ್ರಸಂಗವೊಂದು ನಡೆದಿದೆ. ಮಂಡ್ಯದ ಮಿಮ್ಸ್​ ಆಸ್ಪತ್ರೆಯಲ್ಲಿ ಇಂಥದ್ದೊಂದು ಎಡವಟ್ಟು ಸಂಭವಿಸಿದೆ. ಪದೇಪದೆ ವಿವಾದಗಳ ಕೇಂದ್ರಬಿಂದು ಆಗುತ್ತಿರುವ ಮಿಮ್ಸ್​ ಇದೀಗ ಮತ್ತೊಂದು ವಿವಾದಕ್ಕೆ ಈಡಾಗಿದೆ ಎನ್ನಲಾಗುತ್ತಿದೆ.
ಗ್ಯಾಂಗ್ರೀನ್​ಗೆ ಒಳಗಾಗಿದ್ದ ಮಂಡ್ಯದ ಕೀಲಾರ ಗ್ರಾಮದ ಪ್ರಕಾಶ್ ಎಂಬವರು ಚಿಕಿತ್ಸೆಗಾಗಿ ಮಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ನೀಡಿದ ವೈದ್ಯರು ಗ್ಯಾಂಗ್ರೀನ್​ಗೆ ಒಳಗಾಗಿದ್ದ ಕಾಲನ್ನು ಶಸ್ತ್ರಚಿಕಿತ್ಸೆ ಮಾಡಿ ತೆಗೆದಿದ್ದರು. ಆದರೆ ಅದಾದ ಬಳಿಕ ಆಸ್ಪತ್ರೆ ಸಿಬ್ಬಂದಿ ಕತ್ತರಿಸಲಾಗಿದ್ದ ಕಾಲಿನ ಭಾಗವನ್ನು ತಂದು ಪ್ರಕಾಶ್ ಅವರ ಪತ್ನಿ ಭಾಗ್ಯಮ್ಮ ಅವರಿಗೆ ನೀಡಿದ್ದರು.
 
ಅದನ್ನು ಸ್ವೀಕರಿಸಿದ ಭಾಗ್ಯಮ್ಮ ತಬ್ಬಿಬ್ಬಾಗಿದ್ದು, ಏನು ಮಾಡಬೇಕು ಎಂದು ತೋಚದೆ ಗಂಡನ ಕಾಲನ್ನು ಹಿಡಿದು ಅತ್ತಿದ್ದರು. ದಾಖಲಾದ ಮೂರು ದಿನಗಳ ಬಳಿಕ ಕತ್ತರಿಸಿದ ಕಾಲನ್ನು ನೀಡಿದ್ದ ಆಸ್ಪತ್ರೆಯವರು, ಅದನ್ನು ಎಲ್ಲಾದರೂ ಮಣ್ಣು ಮಾಡುವಂತೆ ಭಾಗ್ಯಮ್ಮನಿಗೇ ಹೇಳಿದ್ದಾರೆ ಎನ್ನಲಾಗಿದೆ. ತಾವೇ ಮಣ್ಣು ಮಾಡಿದರೆ ಸಾವಿರಾರು ರೂಪಾಯಿ ನೀಡಬೇಕು ಎಂದು ಆಸ್ಪತ್ರೆಯವರು ಕೇಳಿದ್ದಾರೆ ಎಂದು ಭಾಗ್ಯಮ್ಮ ಆರೋಪಿಸಿದ್ದು, ಮಿಮ್ಸ್​ ಸಿಬ್ಬಂದಿ ನಡೆ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಕೌಟುಂಬಿಕ ಕಲಹದಿಂದ ಬೇಸತ್ತು ಲಾಡ್ಜ್‌ನಲ್ಲೇ ಸಾವಿಗೆ ಶರಣಾದ ದಾವಣಗೆರೆಯ ಸಬ್‌ ಇನ್‌ಸ್ಪೆಕ್ಟರ್‌

ಸಿಎಂ ಬದಲಾವಣೆ ಕೂಗಿನ ಬೆನ್ನಲ್ಲೇ ಸಿದ್ದರಾಮಯ್ಯಗೆ ಎಐಸಿಸಿಯಲ್ಲಿ ಹೊಸ ಜವಾಬ್ದಾರಿ: ಏನಿದು ಲೆಕ್ಕಾಚಾರ

ಅಜ್ಞಾತ ವಾಸದಿಂದ ಹೊರಬಂದ ಇರಾನ್‌ನ ಸರ್ವೋಚ್ಚ ನಾಯಕ: ಜನರತ್ತ ಕೈಬೀಸಿದ ಅಯಾತೊಲ್ಲಾ ಅಲಿ

ಟೆಕ್ಸಾಸ್‌ನಲ್ಲಿ ಹಠಾತ್ ಪ್ರವಾಹದಿಂದ 50 ಮಂದಿ ಸಾವು: 850 ಮಂದಿಯ ರಕ್ಷಣೆ, 27 ವಿದ್ಯಾರ್ಥಿನಿಯರು ನಾಪತ್ತೆ

ಮುಂದಿನ ಸುದ್ದಿ
Show comments