Webdunia - Bharat's app for daily news and videos

Install App

ಸ್ವಚ್ಛತೆಗೆ ರೋಸಿ ಡೈವೋರ್ಸ್ ಮುಂದಾದ ಪತಿ!

Webdunia
ಶುಕ್ರವಾರ, 3 ಡಿಸೆಂಬರ್ 2021 (11:48 IST)
ಬೆಂಗಳೂರು : ಪತ್ನಿಯ ಅತಿಯಾದ ಸ್ವಚ್ಛತೆಯ ಗೀಳಿನಿಂದ ಬೇಸತ್ತಿರುವ ಪತಿ ದಾಂಪತ್ಯ ಕಡೆದುಕೊಳ್ಳು ವಿವಾಹ ವಿಚ್ಛೇದನಕ್ಕೆ ಮುಂದಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಒಸಿಡಿ ಸಮಸ್ಯೆಯಿಂದ ಬಳಲುತ್ತಿರುವ 35 ವರ್ಷದ ಮಹಿಳೆ ಲ್ಯಾಪ್ಟಾಪ್, ಸೆಲ್ಫೋನ್ಗಳನ್ನು ಡಿಟರ್ಜೆಂಟ್ ಹಾಕಿ ಸ್ವಚ್ಛಗೊಳಿಸುವ ಅತಿರೇಕದ ವರ್ತನೆಯಿಂದ ರೋಸಿರುವ ಪತಿ ಪೊಲೀಸರ ಮೊರೆ ಹೋಗಿದ್ದಾನೆ. ಪೊಲೀಸರು ಈ ಪ್ರಕರಣವನ್ನು ವನಿತಾ ಸಹಾಯವಾಣಿ ಪರಿಹಾರ್ಗೆ ಶಿಫಾರಸು ಮಾಡಿದ್ದಾರೆ.
ಪತಿ ಕೆಲಸ ಮುಗಿಸಿ ಮನೆಗೆ ಬಂದಾಗ ಶೂ, ಬಟ್ಟೆ, ಸೆಲ್ಫೋನ್ ಸ್ವಚ್ಛ ಮಾಡುವಂತೆ ಪದೇ ಪದೇ ಹೇಳುತ್ತಿರುತ್ತಾಳೆ. ಇದರಿಂದ ಕಿರಿಕಿರಿಗೆ ಒಳಗಾಗುವ ಪತಿ, ಈಕೆಯ ಸ್ವಚ್ಛತೆಯ ಅತಿರೇಕದ ವರ್ತನೆಯಿಂದ ಬೇಸತ್ತು ಹೋಗುತ್ತಾನೆ. 
ಲಂಡನ್ನಿಂದ ಬೆಂಗಳೂರಿಗೆ ವಾಪಸ್ ಆಗಿರುವ ದಂಪತಿ ಕೌಟುಂಬಿಕ ಸಮಾಲೋಚನೆಗೆ ಬಳಗಾಗುತ್ತಾರೆ. ಈ ವೇಳೆ ಈ ಸ್ಚಚ್ಛತೆಯ ಗೀಳು ಕೊಂಚ ಕಡಿಮೆಯಾಗುತ್ತದೆ. ಈ ನಡುವೆ ದಂಪತಿಗೆ 2ನೇ ಮಗು ಜನಿಸುತ್ತದೆ. ಕೋವಿಡ್ ಸಂದರ್ಭದಲ್ಲಿ ಸುಮಾಳಿಗೆ ಈ ಸ್ಚಚ್ಛತೆಯ ಗೀಳು ಮತ್ತಷ್ಟು ಹೆಚ್ಚಾಗುತ್ತದೆ.
ಮನೆಯನ್ನು ಪದೇ ಪದೇ ಸ್ಯಾನಿಟೈಸ್ ಮಾಡುವುದು ಮನೆಯ ಪೀಠೋಪಕರಣಗಳು, ಚಮಚ, ಪ್ಲೋರ್ ಮ್ಯಾಟ್ ಸೇರಿದಂತೆ ಎಲ್ಲ ವಸ್ತುಗಳನ್ನು ಪದೇ ಪದೇ ಸ್ವಚ್ಛ ಮಾಡಲು ಶುರು ಮಾಡುತ್ತಾಳೆ. 
ಲಾಕ್ಡೌನ್ ಸಂದರ್ಭದಲ್ಲಿ ದಿನಕ್ಕೆ ಆರು ಬಾರಿ ಸ್ನಾನ ಮಾಡುವುದು, ಸ್ಣಾನಕ್ಕೆ ಬಳಸಿದ ಸೋಪನ್ನು ಮತ್ತೊಂದು ಸೋಪಿನಿಂದ ಸ್ವಚ್ಛಗೊಳಿಸುವ ಮಟ್ಟಕ್ಕೆ ಇವಳ ವರ್ತನೆ ಬದಲಾಗುತ್ತದೆ ಎಂದಿದ್ದಾನೆ. ಈ ನಡುವೆ ದೀರ್ಘಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದ ಸುಮಾ ತಾಯಿ ಮೃತಪಡುತ್ತಾರೆ. ಈ ಘಟನೆ ಬಳಿಕ ಸುಮಾಳ ಸ್ವಚ್ಛತೆಗೀಳು ಉಚ್ಟ್ರಾಯ ಸ್ಥಿತಿಗೆ ತಲುಪುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments