Webdunia - Bharat's app for daily news and videos

Install App

ಹೆಂಡತಿಗೆ ತಾಳಿ ತೆಗೆದುಕೊಳ್ಳಲು ಎಟಿಂಎನ್ನೇ ದೋಚಿದ ಪತಿ

Krishnaveni K
ಮಂಗಳವಾರ, 3 ಡಿಸೆಂಬರ್ 2024 (10:32 IST)
ಬೆಳಗಾವಿ: ಹೆಂಡತಿಯ ಆಸೆ ಪೂರೈಸಲು ಗಂಡಂದಿರು ಏನೇನೋ ಸರ್ಕಸ್ ಮಾಡುವುದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಪತ್ನಿಗೆ ಮಾಂಗಲ್ಯ ಸರ ತೆಗೆದುಕೊಡಲು ಎಟಿಎಂನ್ನೇ ದೋಚಿದ ಘಟನೆ ನಡೆದಿದೆ.

ಬೆಳಗಾವಿಯಲ್ಲಿ ಈ ಘಟನೆ ನಡೆದಿದೆ. ಕೃಷ್ಣ ಸುರೇಶ್ ದೇಸಾಯಿ ಎಂಬಾತ ಎಟಿಎಂಗೆ ಹಣ ಹಾಕುವ ಕೆಲಸ ಮಾಡುತ್ತಿದ್ದ. ಹೀಗಾಗಿ ಕೀ ಕೂಡಾ ಆತನ ಬಳಿಯಿರುತ್ತಿತ್ತು. ಇದನ್ನೇ ಆತ ಲಾಭ ಮಾಡಿಕೊಂಡು ಹೆಚ್ ಡಿಎಫ್ ಸಿ ಬ್ಯಾಂಕ್ ಎಟಿಎಂನಿಂದ ಹಣ ದೋಚಿದ್ದಾನೆ. ಪೊಲೀಸರು ಈಗ ಈತನನ್ನು ಬಂಧಿಸಿದ್ದಾರೆ.

ಸುಮಾರು ಎಂಟು ಲಕ್ಷ ರೂಪಾಯಿಗಳಷ್ಟು ಹಣ ದೋಚಿರುವುದು ಪತ್ತೆಯಾಗಿದೆ. ಈ ಎಟಿಎಂಗೆ ತನ್ನ ಟೀಂ ಜೊತೆ ಬಂದು ಬೆಳಿಗ್ಗೆ ಹಣ ಹಾಕಿದ್ದ. ಸಂಜೆ ಒಬ್ಬನೇ ಬಂದು ಕಳ್ಳತನ ಮಾಡಿ ಹಣ ದೋಚಿ ಪರಾರಿಯಾಗಿದ್ದಾನೆ. ಹಣ ಕಳುವಾಗಿರುವ ಕಾರಣ ಸಿಸಿಟಿವಿ ದೃಶ್ಯ ಪರಿಶೀಲಿಸಲಾಯಿತು. ಈ ವೇಳೆ ಈತನ ಕೃತ್ಯ ಬಯಲಾಗಿದೆ.

ಎರಡು ದಿನದ ಬಳಿಕ ಕೃತ್ಯ ಬಯಲಿಗೆ ಬಂದಿದೆ. ಘಟನೆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಪ್ರಕರಣದ ಬಗ್ಗೆ ತನಿಖೆ ನಡೆಸಿದ ಪೊಲೀಸರು ಕೊನೆಗೂ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಈತನಿಂದ ಮಾಂಗಲ್ಯ ಸರ, ಚಿನ್ನದ ಸರ ಮತ್ತು 7 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ವಿಚಾರಣೆ ವೇಳೆ ಪತ್ನಿಗೆ ಮಾಂಗಲ್ಯ ಖರೀದಿಸಲು ಈ ಖತರ್ನಾಕ್ ಕೆಲಸಕ್ಕೆ ಕೈ ಹಾಕಿದ್ದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments