Webdunia - Bharat's app for daily news and videos

Install App

ಪತ್ನಿಗೆ ಕೈಕೊಟ್ಟ ಪತಿ!

Webdunia
ಭಾನುವಾರ, 28 ನವೆಂಬರ್ 2021 (08:33 IST)
ಹಾಸನ : ಪ್ರೀತಿಸಿ ಮದುವೆಯಾಗಿ 9 ವರ್ಷಗಳ ಕಾಲ ಸಂಸಾರ ಮಾಡಿ, ಪತ್ನಿಗೆ ಮೋಸ ಮಾಡಿದ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕುಂದೂರು ಗ್ರಾಮದಲ್ಲಿ ನಡೆದಿದೆ.
ಮೊದಲ ಮದುವೆ ಮುಚ್ಚಿಟ್ಟು ಮತ್ತೊಂದು ಮದುವೆ ಆಗಲು ಪತಿ ಮುಂದಾಗಿದ್ದು, ಈಗಾಗಲೇ ನಿಶ್ಚಿತಾರ್ಥ ಕೂಡ ಮಾಡಿಕೊಂಡಿದ್ದಾನೆ. ಹೀಗಾಗಿ ನೊಂದ ಪತ್ನಿ, ಪತಿ ಹಾಗೂ ಆತನ ಕುಟುಂಬದ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕಾಲೇಜಿನಲ್ಲಿ ಪರಿಚಯವಾಗಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಅಕ್ಷತಾ ಹಾಗೂ ಲೋಹಿತ್ 9 ವರ್ಷಗಳ ಕಾಲ ಅನ್ಯೋನ್ಯವಾಗಿ ಸಂಸಾರ ನಡೆಸಿದ್ದಾರೆ. ಆದರೆ ಅನ್ಯ ಜಾತಿಯ ಹುಡುಗಿ ಎನ್ನುವ ಕಾರಣಕ್ಕೆ ಲೋಹಿತ್ ತಂದೆ ಮಲ್ಲಿಕಾರ್ಜುನ ಹಾಗೂ ತಾಯಿ ಜಯಶೀಲಾ ಕಿರುಕುಳ ನೀಡುತ್ತಿದ್ದಾರೆ. ಈಗ ತನ್ನಿಂದ ಗಂಡನನ್ನು ದೂರ ಮಾಡಿ ಮೊದಲ ಮದುವೆ ವಿಚಾರವನ್ನೇ ಮುಚ್ಚಿಟ್ಟು ಮತ್ತೊಂದು ಮದುವೆ ಮಾಡಿಸುತ್ತಿದ್ದಾರೆ ಎಂದು ಅಕ್ಷತಾ ಆರೋಪ ಮಾಡಿದ್ದಾರೆ.
ದಕ್ಷಿಣ ಕನ್ನಡ ಮೂಲದ ಯುವತಿ ಜೊತೆಗೆ ವಂಚಕ ಪತಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾನೆ. ಮದುವೆಯಾಗಿ 8 ವರ್ಷದ ಮಗನಿದ್ದರೂ ಬೇರೆ ಮದುವೆಯಾಗಲು ಲೋಹಿತ್ ಕುಟುಂಬ ಮುಂದಾಗಿದ್ದು, ಹುಡುಗಿಗೆ ಮೊದಲ ಮದುವೆ ವಿಚಾರ ಮುಚ್ಚಿಟ್ಟು ಲೋಹಿತ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾನೆ.
 ಹೀಗಾಗಿ ಸುಳ್ಳು ಹೇಳಿ ಹುಡುಗಿಯನ್ನು ನಂಬಿಸಿರುವ ಬಗೆಗಿನ ಆಡಿಯೋ ಸಾಕ್ಷಿ ಇಟ್ಟು ಕೊಂಡು ಕಾನೂನು ಹೋರಾಟಕ್ಕೆ ಪತ್ನಿ ಅಕ್ಷತಾ ಸಜ್ಜಾಗಿದ್ದಾರೆ. ಮಾವ ಮಲ್ಲಿಕಾರ್ಜುನ, ಅತ್ತೆ ಜಯಶೀಲ, ಮೈದುನ ದರ್ಶನ್ ಹಾಗೂ ಪತಿ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದು, ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆದ ಪೊಲೀಸರು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಾಂಗ್ರೆಸ್ ಅವಧಿಯಲ್ಲಿ ಮಿತಿಮೀರಿದೆ ಕಮಿಷನ್: ನಮ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿದ್ರಿ ಆರ್ ಅಶೋಕ್ ಆಕ್ರೋಶ

ಗಣೇಶನ ಮೂರ್ತಿಯನ್ನು ಮನೆಯ ಯಾವ ದಿಕ್ಕಿನಲ್ಲಿ ಕೂರಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments